‘ಆಕ್ರಮಣಕಾರರು ಈ ನಗರದ ಮೇಲೆ ದಾಳಿ ಮಾಡಿದ್ದಾರೆ. ನಾಶ ಮಾಡಲು ಪ್ರಯತ್ನಿಸಿದ್ದಾರೆ. ಇತಿಹಾಸವು ಔರಂಗಜೇಬನ ಕ್ರೌರ್ಯ, ಅವನ ಭಯೋತ್ಪಾದನೆಗೆ ಸಾಕ್ಷಿಯಾಗಿದೆ. ಆತ ಕತ್ತಿಯಿಂದ ನಾಗರಿಕತೆಯನ್ನು ಬದಲಾಯಿಸಲು ಪ್ರಯತ್ನಿಸಿದ್ದ. ಆತ ಮತಾಂಧತೆಯಿಂದ ಸಂಸ್ಕೃತಿಯನ್ನು ತುಳಿಯಲು ಪ್ರಯತ್ನಿಸಿದ. ಆದರೆ ಜಗತ್ತಿನ ಉಳಿದ ಭಾಗಗಳಿಗಿಂತಲೂ ಭಿನ್ನವಾದ ಈ ಮಣ್ಣು, ಒಬ್ಬ ಮೊಗಲ್ ಚಕ್ರವರ್ತಿಗೆ ಬದಲಾಗಿ ಶಿವಾಜಿಯೊಬ್ಬನನ್ನು ಹುಟ್ಟುಹಾಕಿತು,’ ಎಂದು ಹೇಳಿದರು.