‘ಜನರ ಸಮಸ್ಯೆಗಳನ್ನು ಬಗೆಹರಿಸುವುದು ನನ್ನ ಆದ್ಯತೆ. ಅಧಿಕಾರಕ್ಕೆ ಬಂದರೆ ಸರ್ಕಾರದ ಮೊದಲ ನೂರು ದಿನಗಳನ್ನು ಇದಕ್ಕಾಗಿ ಮೀಸಲಿರಿಸಲಾಗುವುದು. ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಜನರಿಂದ ಅರ್ಜಿಗಳನ್ನು ಸ್ವೀಕರಿಸುತ್ತೇನೆ. ಈ ಸಭೆಗಳಿಗೆ ಹಾಜರಾಗಲು ಸಾಧ್ಯವಾಗದೇ ಇದ್ದವರು ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಅಧಿಕಾರಕ್ಕೆ ಬಂದರೆ, ಈ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ನನ್ನ ನೇತೃತ್ವದಲ್ಲೇ ಒಂದು ಪ್ರತ್ಯೇಕ ಇಲಾಖೆ ರಚಿಸುತ್ತೇನೆ. ಈ ಇಲಾಖೆ ಈ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಿದೆ’ ಎಂದರು.