‘ಬಿಹಾರ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳನ್ನು ಗಳಿಸಿದರೂ, ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್ ಕುಮಾರ್ಗೆ ನೀಡುತ್ತೇವೆ ಎಂದು ಬಿಜೆಪಿ ಹೇಳಿತ್ತು. ಇದೇ ರೀತಿಯ ಭರವಸೆಯನ್ನು 2019ನೇ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನಾಗೆ ಬಿಜೆಪಿ ನೀಡಿತ್ತು. ಆದರೆ ಬಿಜೆಪಿ ಮಾತಿನಂತೆ ನಡೆದುಕೊಳ್ಳಲಿಲ್ಲ. ಇದು ಮಹಾರಾಷ್ಟ್ರದಲ್ಲಿ ರಾಜಕೀಯ ‘ಮಹಾಭಾರತ’ವನ್ನು ಸೃಷ್ಟಿಮಾಡಿತ್ತು’ ಎಂದು ಶಿವಸೇನಾದ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಲಾಗಿದೆ.