ಮುಂಬೈನಲ್ಲಿ ಸೋಮವಾರ ಮಾತನಾಡಿರುವ ಅವರು, ‘ಶಿವಸೇನೆ ಮತ್ತೆ ಬಿಜೆಪಿಯೊಂದಿಗೆ ಕೈಜೋಡಿಸಬೇಕು. ಶಿವಸೇನೆ ನಮ್ಮೊಂದಿಗೆ ಬರದಿದ್ದರೆ, ರಾಜ್ಯದ ಅಭಿವೃದ್ಧಿಗಾಗಿ ಎನ್ಡಿಎಗೆ ಸೇರಲು ನಾನು (ಎನ್ಸಿಪಿ ಮುಖ್ಯಸ್ಥ) ಶರದ್ ಪವಾರ್ ಅವರಿಗೆ ಮನವಿ ಮಾಡುತ್ತೇನೆ. ಅವರು ಭವಿಷ್ಯದಲ್ಲಿ ದೊಡ್ಡ ಹುದ್ದೆಯನ್ನು ಪಡೆಯುವ ಅವಕಾಶಗಳಿವೆ. ಶಿವಸೇನೆಯೊಂದಿಗೆ ಉಳಿಯುವುದರಿಂದ ಯಾವುದೇ ಪ್ರಯೋಜನವಿಲ್ಲ,’ ಎಂದು ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ’ (ಆರ್ಪಿಐ) ನಾಯಕರೂ ಆಗಿರುವಅಠವಾಳೆ ಹೇಳಿದ್ದಾರೆ.