ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬಾಕ್ಸರ್ ವಿಜೇಂದರ್ ಸಿಂಗ್, ರೈತರಿಗೆ ಬೆಂಬಲ ಘೋಷಿಸಿದರು. ನಂತರ ಮಾತನಾಡಿದ ಅವರು, ' ಕೇಂದ್ರ ಸರ್ಕಾರ ಒಂದೊಮ್ಮೆ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸದೇ ಹೋದರೆ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಹಿಂದಿರುಗಿಸಬೇಕಾಗುತ್ತದೆ,' ಎಂದು ಎಚ್ಚರಿಕೆ ನೀಡಿದರು.