ಬೆಂಗಳೂರು: 'ಉತ್ತರ ಪ್ರದೇಶವು ಕೇರಳವಾಗಿ ಬದಲಾದರೆ ಅಲ್ಲಿನ ಜನರು ಉತ್ತಮ ಶಿಕ್ಷಣ, ಆರೋಗ್ಯ ಸೇವೆ, ಸಾಮಾಜಿಕ ಸುಧಾರಣೆ, ಜೀವನ ಗುಣಮಟ್ಟ ಮತ್ತು ಸಾಮರಸ್ಯದ ಸಮಾಜವನ್ನು ಆನಂದಿಸುತ್ತಾರೆ. ಜಾತಿ, ಧರ್ಮದ ಹೆಸರಿನಲ್ಲಿ ಕೊಲೆಗಳು ಸಂಭವಿಸುವುದಿಲ್ಲ. ಉತ್ತರ ಪ್ರದೇಶದ ಜನತೆಗೆ ಬೇಕಿರುವುದೇ ಇದು' ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.