<p><strong>ಲಖನೌ:</strong> ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಕೋವಿಡ್ ನಿರ್ವಹಣೆಯ ಲೆಕ್ಕ ಪರಿಶೋಧನೆ ನಡೆಸಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.</p>.<p>ಕೋವಿಡ್ಗೆ ಸಂಬಂಧಿಸಿದ ದತ್ತಾಂಶಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/up-block-panchayat-polls-police-officer-tells-senior-he-has-been-slapped-video-goes-viral-847108.html" itemprop="url">ಉತ್ತರ ಪ್ರದೇಶದಲ್ಲಿ ಬಾಂಬ್ ಹಿಡಿದ ಬಿಜೆಪಿ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆ </a></p>.<p>ಬಿಜೆಪಿ ಆಡಳಿತದ ರಾಜ್ಯ ಸರ್ಕಾರವು ಕೋವಿಡ್ ಅಂಕಿಅಂಶಗಳನ್ನು ಮರೆಮಾಚಿದೆ. ಅವರು ಜನರಿಗೆ ನೆರವಾಗಲು ಇಚ್ಛಿಸುವುದಿಲ್ಲ. ಕೋವಿಡ್ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ. ಔಷಧಿಗಳನ್ನು ಕಾಳಸಂತೆಯಲ್ಲಿಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.</p>.<p>ನಿಯಮಗಳನ್ನು ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದಂತಿದೆ. ಎಲ್ಲ ಹೊರೆ ಜನ ಸಾಮಾನ್ಯರ ಮೇಲೆ ಹಾಕಲಾಗಿದೆ ಎಂದು ವಾಗ್ದಾಳಿ ನಡೆಸಿದರು.</p>.<p>ಕೋವಿಡ್ ಸಾವಿಗೆ ಸಂಬಂಧಿಸಿದ ಅಂಕಿಅಂಶಗಳನ್ನು ಸರ್ಕಾರ ನೀಡಿಲ್ಲ. ಸೋಂಕಿನಿಂದ ಮೃತಪಟ್ಟವರಿಗೆ ಯಾವುದೇ ನೆರವು ನೀಡಿಲ್ಲ.ಸರ್ಕಾರವು ಕೋವಿಡ್ ಸಾವಿನ ವಿವರಗಳನ್ನು ಏಕೆ ಬಹಿರಂಗಪಡಿಸಿಲ್ಲ ? ಏಕೆಂದರೆ ಜನರಿಗೆ ಸಹಾಯ ಮಾಡಲು ಬಯಸುತ್ತಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಕೋವಿಡ್ ನಿರ್ವಹಣೆಯ ಲೆಕ್ಕ ಪರಿಶೋಧನೆ ನಡೆಸಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.</p>.<p>ಕೋವಿಡ್ಗೆ ಸಂಬಂಧಿಸಿದ ದತ್ತಾಂಶಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/up-block-panchayat-polls-police-officer-tells-senior-he-has-been-slapped-video-goes-viral-847108.html" itemprop="url">ಉತ್ತರ ಪ್ರದೇಶದಲ್ಲಿ ಬಾಂಬ್ ಹಿಡಿದ ಬಿಜೆಪಿ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆ </a></p>.<p>ಬಿಜೆಪಿ ಆಡಳಿತದ ರಾಜ್ಯ ಸರ್ಕಾರವು ಕೋವಿಡ್ ಅಂಕಿಅಂಶಗಳನ್ನು ಮರೆಮಾಚಿದೆ. ಅವರು ಜನರಿಗೆ ನೆರವಾಗಲು ಇಚ್ಛಿಸುವುದಿಲ್ಲ. ಕೋವಿಡ್ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ. ಔಷಧಿಗಳನ್ನು ಕಾಳಸಂತೆಯಲ್ಲಿಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.</p>.<p>ನಿಯಮಗಳನ್ನು ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದಂತಿದೆ. ಎಲ್ಲ ಹೊರೆ ಜನ ಸಾಮಾನ್ಯರ ಮೇಲೆ ಹಾಕಲಾಗಿದೆ ಎಂದು ವಾಗ್ದಾಳಿ ನಡೆಸಿದರು.</p>.<p>ಕೋವಿಡ್ ಸಾವಿಗೆ ಸಂಬಂಧಿಸಿದ ಅಂಕಿಅಂಶಗಳನ್ನು ಸರ್ಕಾರ ನೀಡಿಲ್ಲ. ಸೋಂಕಿನಿಂದ ಮೃತಪಟ್ಟವರಿಗೆ ಯಾವುದೇ ನೆರವು ನೀಡಿಲ್ಲ.ಸರ್ಕಾರವು ಕೋವಿಡ್ ಸಾವಿನ ವಿವರಗಳನ್ನು ಏಕೆ ಬಹಿರಂಗಪಡಿಸಿಲ್ಲ ? ಏಕೆಂದರೆ ಜನರಿಗೆ ಸಹಾಯ ಮಾಡಲು ಬಯಸುತ್ತಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>