ಅಹಮದಾಬಾದ್: ಆಡಳಿತಾರೂಢ ಬಿಜೆಪಿ ಹಾಗೂ ಪ್ರಮುಖ ವಿರೋಧಪಕ್ಷ ಕಾಂಗ್ರೆಸ್ ವಿರುದ್ಧ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಭಾನುವಾರ ವಾಗ್ದಾಳಿ ನಡೆಸಿದ್ದು, ‘ನೀವು ಕಾಂಗ್ರೆಸ್ಗೆ ಮತ ನೀಡಿದಲ್ಲಿ ಸೋನಿಯಾ ಗಾಂಧಿ ಪುತ್ರ ರಾಹುಲ್ ಗಾಂಧಿ ಅಭಿವೃದ್ಧಿಯಾಗುತ್ತದೆ, ಅಂತೆಯೇ ನೀವು ಬಿಜೆಪಿಗೆ ಮತ ಹಾಕಿದರೆ ಅಮಿತ್ ಶಾ ಮಗ ಅಭಿವೃದ್ಧಿ ಹೊಂದುತ್ತಾರೆ. ಆದರೆ, ನೀವು ಎಎಪಿಗೆ ಮತ ಹಾಕಿದರೆ ಗುಜರಾತ್ ಅಭಿವೃದ್ಧಿಯಾಗುತ್ತದೆ’ ಎಂದು ಹೇಳಿದ್ದಾರೆ.