<p>ಕಾನ್ಪುರ: ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಏಪ್ರಿಲ್ ವೇಳೆಗೆ ಕೊನೆಗೊಳ್ಳಲಿದೆ ಎಂದು ಐಐಟಿ ಕಾನ್ಪುರದ ಪ್ರೊಫೆಸರ್ ಮಣೀಂದ್ರ ಅಗರ್ವಾಲ್ ಅವರು ಹೇಳಿದ್ದಾರೆ.</p>.<p>ಆದಾಗ್ಯೂ, ಚುನಾವಣಾ ಸಮಾವೇಶಗಳಿಂದಾಗಿ ಕೊರೊನಾ ವೈರಸ್ ಸೋಂಕು ಮತ್ತಷ್ಟು ತೀವ್ರವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಸಮಾವೇಶಗಳಲ್ಲಿ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<p>ಸಮಾವೇಶಗಳ ವಿಚಾರದಲ್ಲಿ ಎಚ್ಚರಿಕೆ ಹೊಂದಿರಬೇಕು. ಇಲ್ಲವಾದಲ್ಲಿ, ಸೋಂಕು ವೇಗವಾಗಿ ಹರಡುತ್ತದೆ ಎಂದು ಅಗರ್ವಾಲ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಐಎನ್ಎಸ್ ವರದಿ ಮಾಡಿದೆ.</p>.<p>ಅಂಕಿ-ಅಂಶಗಳ ಆಧಾರದ ಮೇಲೆ ಸಾಂಕ್ರಾಮಿಕ ರೋಗದ ಭವಿಷ್ಯತ್ತಿನ ಬಗ್ಗೆ ಮಾತನಾಡಿರುವ ಅಗರ್ವಾಲ್, 'ಜನವರಿಯಲ್ಲಿ ಭಾರತದ ಮೂರನೇ ಅಲೆ ಮೇಲೇಳಲಿದೆ. ಮಾರ್ಚ್ನಲ್ಲಿ ಪ್ರತಿದಿನ 1.8 ಲಕ್ಷ ಪ್ರಕರಣಗಳು ವರದಿಯಾಗಲಿವೆ' ಎಂದು ಮನ್ಸೂಚನೆ ನೀಡಿದ್ದಾರೆ.</p>.<p>ಈ ಅಲೆಯಲ್ಲಿ 10ರಲ್ಲಿ ಒಬ್ಬರಿಗೆ ಮಾತ್ರ ಆಸ್ಪತ್ರೆಯ ಅಗತ್ಯವಿರಲಿದೆ. ಇದು ಎಲ್ಲರೂ ಸಮಾಧಾನ ಪಡಬೇಕಾದ ಸಂಗತಿ. ಮಾರ್ಚ್ ಮಧ್ಯದಲ್ಲಿ ಎರಡು ಲಕ್ಷ ಬೆಡ್ಗಳು ಬೇಕಾಗುತ್ತವೆ ಎಂದು ಅವರು ಹೇಳಿದ್ದಾರೆ.</p>.<p>ಆಫ್ರಿಕಾ ಮತ್ತು ಭಾರತದಲ್ಲಿ ಶೇಕಡಾ 80 ರಷ್ಟು ಜನಸಂಖ್ಯೆಯು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನೈಸರ್ಗಿಕ ಪ್ರತಿರೋಧಕ ಶಕ್ತಿಯು ಎರಡೂ ದೇಶಗಳ ಜನರಲ್ಲಿ ಶೇ 80ರಷ್ಟಿದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾನ್ಪುರ: ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಏಪ್ರಿಲ್ ವೇಳೆಗೆ ಕೊನೆಗೊಳ್ಳಲಿದೆ ಎಂದು ಐಐಟಿ ಕಾನ್ಪುರದ ಪ್ರೊಫೆಸರ್ ಮಣೀಂದ್ರ ಅಗರ್ವಾಲ್ ಅವರು ಹೇಳಿದ್ದಾರೆ.</p>.<p>ಆದಾಗ್ಯೂ, ಚುನಾವಣಾ ಸಮಾವೇಶಗಳಿಂದಾಗಿ ಕೊರೊನಾ ವೈರಸ್ ಸೋಂಕು ಮತ್ತಷ್ಟು ತೀವ್ರವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಸಮಾವೇಶಗಳಲ್ಲಿ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<p>ಸಮಾವೇಶಗಳ ವಿಚಾರದಲ್ಲಿ ಎಚ್ಚರಿಕೆ ಹೊಂದಿರಬೇಕು. ಇಲ್ಲವಾದಲ್ಲಿ, ಸೋಂಕು ವೇಗವಾಗಿ ಹರಡುತ್ತದೆ ಎಂದು ಅಗರ್ವಾಲ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಐಎನ್ಎಸ್ ವರದಿ ಮಾಡಿದೆ.</p>.<p>ಅಂಕಿ-ಅಂಶಗಳ ಆಧಾರದ ಮೇಲೆ ಸಾಂಕ್ರಾಮಿಕ ರೋಗದ ಭವಿಷ್ಯತ್ತಿನ ಬಗ್ಗೆ ಮಾತನಾಡಿರುವ ಅಗರ್ವಾಲ್, 'ಜನವರಿಯಲ್ಲಿ ಭಾರತದ ಮೂರನೇ ಅಲೆ ಮೇಲೇಳಲಿದೆ. ಮಾರ್ಚ್ನಲ್ಲಿ ಪ್ರತಿದಿನ 1.8 ಲಕ್ಷ ಪ್ರಕರಣಗಳು ವರದಿಯಾಗಲಿವೆ' ಎಂದು ಮನ್ಸೂಚನೆ ನೀಡಿದ್ದಾರೆ.</p>.<p>ಈ ಅಲೆಯಲ್ಲಿ 10ರಲ್ಲಿ ಒಬ್ಬರಿಗೆ ಮಾತ್ರ ಆಸ್ಪತ್ರೆಯ ಅಗತ್ಯವಿರಲಿದೆ. ಇದು ಎಲ್ಲರೂ ಸಮಾಧಾನ ಪಡಬೇಕಾದ ಸಂಗತಿ. ಮಾರ್ಚ್ ಮಧ್ಯದಲ್ಲಿ ಎರಡು ಲಕ್ಷ ಬೆಡ್ಗಳು ಬೇಕಾಗುತ್ತವೆ ಎಂದು ಅವರು ಹೇಳಿದ್ದಾರೆ.</p>.<p>ಆಫ್ರಿಕಾ ಮತ್ತು ಭಾರತದಲ್ಲಿ ಶೇಕಡಾ 80 ರಷ್ಟು ಜನಸಂಖ್ಯೆಯು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನೈಸರ್ಗಿಕ ಪ್ರತಿರೋಧಕ ಶಕ್ತಿಯು ಎರಡೂ ದೇಶಗಳ ಜನರಲ್ಲಿ ಶೇ 80ರಷ್ಟಿದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>