ಆರಿಫ್ ಮತ್ತು ಆತನ ಸಹೋದರ ಸಜ್ಜು ಎಂಬವರಿಗೆ ಸೇರಿದ್ದ ಕಟ್ಟಡವನ್ನು ನೆಲಸಮ ಮಾಡಲಾಗಿದೆ. ಆರಿಫ್ ಮತ್ತು ಸಜ್ಜು ಇಬ್ಬರೂ ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ವ್ಯಕ್ತಿಗಳಾಗಿದ್ದು, ಸಜ್ಜು ಪೊಲೀಸ್ ಕಸ್ಟಡಿಯಲ್ಲಿದ್ದರೆ, ಆರಿಫ್ನನ್ನು ಬಂಧಿಸಿ ಕರೆದೊಯ್ಯುವಾಗ ಗೆಳೆಯರ ಸಹಾಯದಿಂದ ಪರಾರಿಯಾಗಿದ್ದ. ಈ ಕುರಿತು ಪ್ರಕರಣ ದಾಖಲಾಗಿತ್ತು.