<p><strong>ನವದೆಹಲಿ:</strong>ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆಕ್ಲೀನ್ಚಿಟ್ ನೀಡಲುಆರೋಪಿ ಮನ್ಸೂರ್ ಖಾನ್ನಿಂದ ಲಂಚ ಪಡೆದ ಆರೋಪದಡಿ ಕರ್ನಾಟಕದ ಇಬ್ಬರು ಅಧಿಕಾರಿಗಳ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ದಾಖಲಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>₹ 4,000 ಕೋಟಿ ವಂಚನೆ ಪ್ರಕರಣದಲ್ಲಿಬೆಂಗಳೂರು ಉತ್ತರ ತಾಲ್ಲೂಕು ಉಪವಿಭಾಗಾಧಿಕಾರಿಯಾಗಿದ್ದ ಎಲ್.ಸಿ.ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಎನ್. ವಿರುದ್ಧ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಪಡೆದ ಬಳಿಕ ಸಿಬಿಐ ಈ ದೋಷಾರೋಪ ಪಟ್ಟಿ ದಾಖಲಿಸಿದೆ. ಖಾನ್ನಿಂದ ನಾಗರಾಜ್ ₹4.5 ಕೋಟಿ ಹಾಗೂ ಮಧ್ಯವರ್ತಿಯಾಗಿದ್ದ ಮಂಜುನಾಥ್ ₹10 ಲಕ್ಷ ಲಂಚ ಪಡೆದಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಕರಣದ ಕುರಿತ ಎಫ್ಐಆರ್ನಲ್ಲಿಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಬಿ.ಎಂ.ವಿಜಯ್ ಶಂಕರ್ ಅವರ ಹೆಸರಿದ್ದರೂ, ಅವರು ಮೃತಪಟ್ಟಿರುವ ಕಾರಣದೋಷಾರೋಪ ಪಟ್ಟಿಯಲ್ಲಿ ಅವರ ಹೆಸರು ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಐಎಂಎ ಜ್ಯುವೆಲ್ಸ್ನ ಚಟುವಟಿಕೆಗಳ ಬಗ್ಗೆ ದೂರುಗಳು ಕೇಳಿಬಂದ ಸಂದರ್ಭದಲ್ಲಿ ತನಿಖೆ ನಡೆಸಲು ಸರ್ಕಾರವು ಜಿಲ್ಲಾ ಆಡಳಿತಕ್ಕೆ ಸೂಚಿಸಿತ್ತು. ಈ ಸಂದರ್ಭದಲ್ಲಿ ಐಎಂಎ ಬಂಡವಾಳ ಸಂಸ್ಥೆಯಲ್ಲಿ ಯಾವುದೇ ಅವ್ಯವಹಾರಗಳಿಲ್ಲ ಎಂದು ಎಲ್.ಸಿ.ನಾಗರಾಜ್ ವರದಿ ತಯಾರಿಸಿ, ಖಾನ್ಗೆ ಕ್ಲೀನ್ಚಿಟ್ ನೀಡಿದ್ದರು. ಈ ವರದಿಯನ್ನು ಪರಿಶೀಲಿಸದೆಯೇ ಶಂಕರ್ ಅವರು ಅದನ್ನು ಸರ್ಕಾರಕ್ಕೆ ಸಲ್ಲಿಸಿದ್ದರು’ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆಕ್ಲೀನ್ಚಿಟ್ ನೀಡಲುಆರೋಪಿ ಮನ್ಸೂರ್ ಖಾನ್ನಿಂದ ಲಂಚ ಪಡೆದ ಆರೋಪದಡಿ ಕರ್ನಾಟಕದ ಇಬ್ಬರು ಅಧಿಕಾರಿಗಳ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ದಾಖಲಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>₹ 4,000 ಕೋಟಿ ವಂಚನೆ ಪ್ರಕರಣದಲ್ಲಿಬೆಂಗಳೂರು ಉತ್ತರ ತಾಲ್ಲೂಕು ಉಪವಿಭಾಗಾಧಿಕಾರಿಯಾಗಿದ್ದ ಎಲ್.ಸಿ.ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಎನ್. ವಿರುದ್ಧ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಪಡೆದ ಬಳಿಕ ಸಿಬಿಐ ಈ ದೋಷಾರೋಪ ಪಟ್ಟಿ ದಾಖಲಿಸಿದೆ. ಖಾನ್ನಿಂದ ನಾಗರಾಜ್ ₹4.5 ಕೋಟಿ ಹಾಗೂ ಮಧ್ಯವರ್ತಿಯಾಗಿದ್ದ ಮಂಜುನಾಥ್ ₹10 ಲಕ್ಷ ಲಂಚ ಪಡೆದಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಕರಣದ ಕುರಿತ ಎಫ್ಐಆರ್ನಲ್ಲಿಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಬಿ.ಎಂ.ವಿಜಯ್ ಶಂಕರ್ ಅವರ ಹೆಸರಿದ್ದರೂ, ಅವರು ಮೃತಪಟ್ಟಿರುವ ಕಾರಣದೋಷಾರೋಪ ಪಟ್ಟಿಯಲ್ಲಿ ಅವರ ಹೆಸರು ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಐಎಂಎ ಜ್ಯುವೆಲ್ಸ್ನ ಚಟುವಟಿಕೆಗಳ ಬಗ್ಗೆ ದೂರುಗಳು ಕೇಳಿಬಂದ ಸಂದರ್ಭದಲ್ಲಿ ತನಿಖೆ ನಡೆಸಲು ಸರ್ಕಾರವು ಜಿಲ್ಲಾ ಆಡಳಿತಕ್ಕೆ ಸೂಚಿಸಿತ್ತು. ಈ ಸಂದರ್ಭದಲ್ಲಿ ಐಎಂಎ ಬಂಡವಾಳ ಸಂಸ್ಥೆಯಲ್ಲಿ ಯಾವುದೇ ಅವ್ಯವಹಾರಗಳಿಲ್ಲ ಎಂದು ಎಲ್.ಸಿ.ನಾಗರಾಜ್ ವರದಿ ತಯಾರಿಸಿ, ಖಾನ್ಗೆ ಕ್ಲೀನ್ಚಿಟ್ ನೀಡಿದ್ದರು. ಈ ವರದಿಯನ್ನು ಪರಿಶೀಲಿಸದೆಯೇ ಶಂಕರ್ ಅವರು ಅದನ್ನು ಸರ್ಕಾರಕ್ಕೆ ಸಲ್ಲಿಸಿದ್ದರು’ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>