<p class="title"><strong>ಮುಂಬೈ/ಇಡುಕ್ಕಿ/ಭುವನೇಶ್ವರ:</strong> ಮಹಾರಾಷ್ಟ್ರ, ಕೇರಳ ಮತ್ತು ಒಡಿಶಾದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ತಗ್ಗುಪ್ರದೇಶಗಳು, ಕೃಷಿ ಭೂಮಿ ಮತ್ತು ರಸ್ತೆಗಳು ಜಲಾವೃತಗೊಂಡಿವೆ.</p>.<p class="title">ಮಹಾರಾಷ್ಟ್ರ, ಒಡಿಶಾದ ಹಲವೆಡೆ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕೇರಳದಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಇಡುಕ್ಕಿ, ಮಲಪ್ಪುರ ಸೇರಿದಂತೆ ಹಲವು ಡ್ಯಾಂಗಳಿಂದ ನೀರನ್ನು ಹೊರಬಿಡಲಾಗಿದೆ.</p>.<p class="title">ಮಹಾರಾಷ್ಟ್ರದ ಉತ್ತರ ಕೊಂಕಣ ಮತ್ತು ಉತ್ತರ ಕೇಂದ್ರ, ಪೂರ್ವ ಮತ್ತು ಪಶ್ಚಿಮ ವಿದರ್ಭ ಪ್ರದೇಶಗಳಲ್ಲಿ ಇದೇ 12ರ ವರೆಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮರಾಠವಾಡ, ದಕ್ಷಿಣ ಕೇಂದ್ರ ಮಹಾರಾಷ್ಟ್ರ, ದಕ್ಷಿಣ ಕೊಂಕಣ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>.<p class="title">ಸೋಮವಾರ ರಾತ್ರಿಯಿಂದ ಮುಂಬೈನಲ್ಲಿ ಗಾಳಿಸಹಿತ ಭಾರಿ ಮಳೆ ಸುರಿಯುತ್ತಿದ್ದು, ಅಂಧೇರಿ ಮುಂತಾದ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಇದರಿಂದ ರೈಲು ಮತ್ತು ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.</p>.<p><strong>ಕೇರಳದ ಡ್ಯಾಂಗಳು ಭರ್ತಿ:</strong> ಕೇರಳದ ಇಡುಕ್ಕಿ ಜಲಾಶಯದ ನೀರಿನ ಮಟ್ಟ ಅಪಾಯದ ಮಟ್ಟ ಸಮೀಪಿಸುತ್ತಿದೆ. ಪೆರಿಯಾರ್ ಮತ್ತು ಚೆರುತೋನಿ ಡ್ಯಾಂ ತಟದಲ್ಲಿ ವಾಸಿಸುವ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.</p>.<p>ವಯನಾಡಿನ ಬಾಣಾಸುರ ಸಾಗರ ಅಣೆಕಟ್ಟೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದ್ದು, ಅಣೆಕಟ್ಟೆಯ ಎರಡು ಗೇಟುಗಳನ್ನು ತೆರೆಯಲಾಗಿದೆ. ಇದರಿಂದ ಕರ್ನಾಟಕದ ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಮನೆ ಕುಸಿದು 6 ಮಂದಿಗೆ ಗಾಯ:</strong> ಒಡಿಶಾದ ನವರಂಗಪುರದಲ್ಲಿ ಮನೆ ಕುಸಿದು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನೌಪದದಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ಬಾರ್ಗಡ್, ಸಂಬಾಲ್ಪುರ್, ಅಂಗುಲ್ ಮುಂತಾದ ಜಿಲ್ಲೆಗಳಲ್ಲಿ ಬುಧವಾರದವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರದವರೆಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ/ಇಡುಕ್ಕಿ/ಭುವನೇಶ್ವರ:</strong> ಮಹಾರಾಷ್ಟ್ರ, ಕೇರಳ ಮತ್ತು ಒಡಿಶಾದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ತಗ್ಗುಪ್ರದೇಶಗಳು, ಕೃಷಿ ಭೂಮಿ ಮತ್ತು ರಸ್ತೆಗಳು ಜಲಾವೃತಗೊಂಡಿವೆ.</p>.<p class="title">ಮಹಾರಾಷ್ಟ್ರ, ಒಡಿಶಾದ ಹಲವೆಡೆ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕೇರಳದಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಇಡುಕ್ಕಿ, ಮಲಪ್ಪುರ ಸೇರಿದಂತೆ ಹಲವು ಡ್ಯಾಂಗಳಿಂದ ನೀರನ್ನು ಹೊರಬಿಡಲಾಗಿದೆ.</p>.<p class="title">ಮಹಾರಾಷ್ಟ್ರದ ಉತ್ತರ ಕೊಂಕಣ ಮತ್ತು ಉತ್ತರ ಕೇಂದ್ರ, ಪೂರ್ವ ಮತ್ತು ಪಶ್ಚಿಮ ವಿದರ್ಭ ಪ್ರದೇಶಗಳಲ್ಲಿ ಇದೇ 12ರ ವರೆಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮರಾಠವಾಡ, ದಕ್ಷಿಣ ಕೇಂದ್ರ ಮಹಾರಾಷ್ಟ್ರ, ದಕ್ಷಿಣ ಕೊಂಕಣ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>.<p class="title">ಸೋಮವಾರ ರಾತ್ರಿಯಿಂದ ಮುಂಬೈನಲ್ಲಿ ಗಾಳಿಸಹಿತ ಭಾರಿ ಮಳೆ ಸುರಿಯುತ್ತಿದ್ದು, ಅಂಧೇರಿ ಮುಂತಾದ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಇದರಿಂದ ರೈಲು ಮತ್ತು ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.</p>.<p><strong>ಕೇರಳದ ಡ್ಯಾಂಗಳು ಭರ್ತಿ:</strong> ಕೇರಳದ ಇಡುಕ್ಕಿ ಜಲಾಶಯದ ನೀರಿನ ಮಟ್ಟ ಅಪಾಯದ ಮಟ್ಟ ಸಮೀಪಿಸುತ್ತಿದೆ. ಪೆರಿಯಾರ್ ಮತ್ತು ಚೆರುತೋನಿ ಡ್ಯಾಂ ತಟದಲ್ಲಿ ವಾಸಿಸುವ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.</p>.<p>ವಯನಾಡಿನ ಬಾಣಾಸುರ ಸಾಗರ ಅಣೆಕಟ್ಟೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದ್ದು, ಅಣೆಕಟ್ಟೆಯ ಎರಡು ಗೇಟುಗಳನ್ನು ತೆರೆಯಲಾಗಿದೆ. ಇದರಿಂದ ಕರ್ನಾಟಕದ ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಮನೆ ಕುಸಿದು 6 ಮಂದಿಗೆ ಗಾಯ:</strong> ಒಡಿಶಾದ ನವರಂಗಪುರದಲ್ಲಿ ಮನೆ ಕುಸಿದು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನೌಪದದಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ಬಾರ್ಗಡ್, ಸಂಬಾಲ್ಪುರ್, ಅಂಗುಲ್ ಮುಂತಾದ ಜಿಲ್ಲೆಗಳಲ್ಲಿ ಬುಧವಾರದವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರದವರೆಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>