<p><strong>ನವದೆಹಲಿ:</strong> ಕೋವಿಡ್ ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ, ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ತಕ್ಷಣವೇ ಲಾಕ್ಡೌನ್ ಘೋಷಿಸಲಾಗುವುದು ಎಂದು ನವದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.</p>.<p>ಸಂಭಾವ್ಯ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಸೋಂಕಿತರಿಗಾಗಿ 37,000 ಹಾಸಿಗೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.</p>.<p><strong>ಓದಿ:</strong><a href="https://www.prajavani.net/karnataka-news/covid-coronavirus-pandemic-bangalore-new-virus-855069.html" itemprop="url">ಕೋವಿಡ್ನ ಹೊಸ ತಳಿ ‘ಇಟಾ’ ಮಂಗಳೂರಿನಲ್ಲಿ ಪತ್ತೆ</a></p>.<p>ಒಂದು ವೇಳೆ ಮೂರನೇ ಅಲೆಯು ತೀರಾ ಕೆಟ್ಟ ಪರಿಸ್ಥಿತಿ ಉಂಟುಮಾಡಿದರೆ ಅದನ್ನು ಎದುರಿಸಲು ಬೇಕಾದ ಎಲ್ಲ ಸಿದ್ಧತೆಯನ್ನೂ ಸರ್ಕಾರ ಮಾಡಿಕೊಂಡಿದೆ ಎಂದು ವಾಣಿಜ್ಯೋದ್ಯಮ ಮಹಾಸಂಘದ (ಅಸೋಚಾಂ) ವರ್ಚುವಲ್ ಸಭೆಯಲ್ಲಿ ಜೈನ್ ಹೇಳಿದ್ದಾರೆ.</p>.<p>ಎರಡನೇ ಅಲೆಯ ಸಂದರ್ಭದ ಅನುಭವಗಳಿಂದ ದೆಹಲಿ ನಗರಾಡಳಿತವು ಪಾಠ ಕಲಿತಿದೆ. ಹೆಚ್ಚು ಆಮ್ಲಜನಕ ಘಟಕಗಳು, ಐಸಿಯು ಬೆಡ್ಗಳನ್ನು ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ಉಲ್ಲೇಖಿಸಿ ಅವರು ತಿಳಿಸಿದ್ದಾರೆ.</p>.<p>ಗುರುವಾರ ದೆಹಲಿಯಲ್ಲಿ 61 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ 0.08ರಷ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್ ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ, ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ತಕ್ಷಣವೇ ಲಾಕ್ಡೌನ್ ಘೋಷಿಸಲಾಗುವುದು ಎಂದು ನವದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.</p>.<p>ಸಂಭಾವ್ಯ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಸೋಂಕಿತರಿಗಾಗಿ 37,000 ಹಾಸಿಗೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.</p>.<p><strong>ಓದಿ:</strong><a href="https://www.prajavani.net/karnataka-news/covid-coronavirus-pandemic-bangalore-new-virus-855069.html" itemprop="url">ಕೋವಿಡ್ನ ಹೊಸ ತಳಿ ‘ಇಟಾ’ ಮಂಗಳೂರಿನಲ್ಲಿ ಪತ್ತೆ</a></p>.<p>ಒಂದು ವೇಳೆ ಮೂರನೇ ಅಲೆಯು ತೀರಾ ಕೆಟ್ಟ ಪರಿಸ್ಥಿತಿ ಉಂಟುಮಾಡಿದರೆ ಅದನ್ನು ಎದುರಿಸಲು ಬೇಕಾದ ಎಲ್ಲ ಸಿದ್ಧತೆಯನ್ನೂ ಸರ್ಕಾರ ಮಾಡಿಕೊಂಡಿದೆ ಎಂದು ವಾಣಿಜ್ಯೋದ್ಯಮ ಮಹಾಸಂಘದ (ಅಸೋಚಾಂ) ವರ್ಚುವಲ್ ಸಭೆಯಲ್ಲಿ ಜೈನ್ ಹೇಳಿದ್ದಾರೆ.</p>.<p>ಎರಡನೇ ಅಲೆಯ ಸಂದರ್ಭದ ಅನುಭವಗಳಿಂದ ದೆಹಲಿ ನಗರಾಡಳಿತವು ಪಾಠ ಕಲಿತಿದೆ. ಹೆಚ್ಚು ಆಮ್ಲಜನಕ ಘಟಕಗಳು, ಐಸಿಯು ಬೆಡ್ಗಳನ್ನು ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ಉಲ್ಲೇಖಿಸಿ ಅವರು ತಿಳಿಸಿದ್ದಾರೆ.</p>.<p>ಗುರುವಾರ ದೆಹಲಿಯಲ್ಲಿ 61 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ 0.08ರಷ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>