<p><strong>ಹೈದರಾಬಾದ್:</strong> ‘ಡ್ರಗ್ಸ್ ಮಾಫಿಯಾ ಹಾಗೂ ಫ್ಯಾಸಿಸ್ಟ್ ಶಕ್ತಿಗಳಿಂದ ರಾಜ್ಯದ ಜನತೆಯನ್ನು ರಕ್ಷಿಸಲು ಕೂಡಲೇ ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು’ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಗುರುವಾರ ಮನವಿ ಮಾಡಿದರು.</p>.<p>ಇಲ್ಲಿನ ಮಂಗಳಗಿರಿಯಲ್ಲಿರುವ ಪಕ್ಷದ ಕಚೇರಿಯಲ್ಲಿ 36 ಗಂಟೆಗಳ ನಿರಶನ ಸತ್ಯಾಗ್ರಹ ಆರಂಭಿಸಿದ ನಂತರ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.</p>.<p>ಪಕ್ಷದ ಕಚೇರಿಯನ್ನು ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಧ್ವಂಸಗೊಳಿಸಿದರು ಎನ್ನಲಾಗಿದೆ. ಇದನ್ನು ಖಂಡಿಸಿ ಅವರು ಸತ್ಯಾಗ್ರಹ ಆರಂಭಿಸಿದ್ದಾರೆ.</p>.<p>‘ಆಂಧ್ರಪ್ರದೇಶದಲ್ಲಿ ರಾಜ್ಯ ಸರ್ಕಾರ ಪ್ರಾಯೋಜಿತ ಭಯೋತ್ಪಾದಕ ಕೃತ್ಯಗಳು ನಡೆಯುತ್ತಿವೆ’ ಎಂದು ಆರೋಪಿಸಿದರು. ‘ಡ್ರಗ್ಸ್ ಜಾಲ ಕೇವಲ ಆಂಧ್ರಪ್ರದೇಶಕ್ಕೆ ಸೀಮಿತವಾಗಿಲ್ಲ. ನೆರೆಯ ರಾಜ್ಯಗಳಾದ ತೆಲಂಗಾಣ, ಕರ್ನಾಟಕ, ತಮಿಳುನಾಡು ಅಲ್ಲದೇ, ಉತ್ತರಪ್ರದೇಶ, ಮಹಾರಾಷ್ಟ್ರಕ್ಕೂ ಹಬ್ಬಿದೆ. ಈ ಸಾಮಾಜಿಕ ಅನಿಷ್ಟದಿಂದ ರಾಜ್ಯದ ಯುವ ಜನತೆಯನ್ನು ರಕ್ಷಿಸಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ಡ್ರಗ್ಸ್ ಮಾಫಿಯಾ ಹಾಗೂ ಫ್ಯಾಸಿಸ್ಟ್ ಶಕ್ತಿಗಳಿಂದ ರಾಜ್ಯದ ಜನತೆಯನ್ನು ರಕ್ಷಿಸಲು ಕೂಡಲೇ ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು’ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಗುರುವಾರ ಮನವಿ ಮಾಡಿದರು.</p>.<p>ಇಲ್ಲಿನ ಮಂಗಳಗಿರಿಯಲ್ಲಿರುವ ಪಕ್ಷದ ಕಚೇರಿಯಲ್ಲಿ 36 ಗಂಟೆಗಳ ನಿರಶನ ಸತ್ಯಾಗ್ರಹ ಆರಂಭಿಸಿದ ನಂತರ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.</p>.<p>ಪಕ್ಷದ ಕಚೇರಿಯನ್ನು ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಧ್ವಂಸಗೊಳಿಸಿದರು ಎನ್ನಲಾಗಿದೆ. ಇದನ್ನು ಖಂಡಿಸಿ ಅವರು ಸತ್ಯಾಗ್ರಹ ಆರಂಭಿಸಿದ್ದಾರೆ.</p>.<p>‘ಆಂಧ್ರಪ್ರದೇಶದಲ್ಲಿ ರಾಜ್ಯ ಸರ್ಕಾರ ಪ್ರಾಯೋಜಿತ ಭಯೋತ್ಪಾದಕ ಕೃತ್ಯಗಳು ನಡೆಯುತ್ತಿವೆ’ ಎಂದು ಆರೋಪಿಸಿದರು. ‘ಡ್ರಗ್ಸ್ ಜಾಲ ಕೇವಲ ಆಂಧ್ರಪ್ರದೇಶಕ್ಕೆ ಸೀಮಿತವಾಗಿಲ್ಲ. ನೆರೆಯ ರಾಜ್ಯಗಳಾದ ತೆಲಂಗಾಣ, ಕರ್ನಾಟಕ, ತಮಿಳುನಾಡು ಅಲ್ಲದೇ, ಉತ್ತರಪ್ರದೇಶ, ಮಹಾರಾಷ್ಟ್ರಕ್ಕೂ ಹಬ್ಬಿದೆ. ಈ ಸಾಮಾಜಿಕ ಅನಿಷ್ಟದಿಂದ ರಾಜ್ಯದ ಯುವ ಜನತೆಯನ್ನು ರಕ್ಷಿಸಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>