‘ಆಂಧ್ರಪ್ರದೇಶದಲ್ಲಿ ರಾಜ್ಯ ಸರ್ಕಾರ ಪ್ರಾಯೋಜಿತ ಭಯೋತ್ಪಾದಕ ಕೃತ್ಯಗಳು ನಡೆಯುತ್ತಿವೆ’ ಎಂದು ಆರೋಪಿಸಿದರು. ‘ಡ್ರಗ್ಸ್ ಜಾಲ ಕೇವಲ ಆಂಧ್ರಪ್ರದೇಶಕ್ಕೆ ಸೀಮಿತವಾಗಿಲ್ಲ. ನೆರೆಯ ರಾಜ್ಯಗಳಾದ ತೆಲಂಗಾಣ, ಕರ್ನಾಟಕ, ತಮಿಳುನಾಡು ಅಲ್ಲದೇ, ಉತ್ತರಪ್ರದೇಶ, ಮಹಾರಾಷ್ಟ್ರಕ್ಕೂ ಹಬ್ಬಿದೆ. ಈ ಸಾಮಾಜಿಕ ಅನಿಷ್ಟದಿಂದ ರಾಜ್ಯದ ಯುವ ಜನತೆಯನ್ನು ರಕ್ಷಿಸಬೇಕು’ ಎಂದು ಅವರು ಹೇಳಿದರು.