ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ‘ಹಿಂದಿ ಹೇರಿಕೆ’ ವಿಷಯ ಪ್ರಸ್ತಾಪಿಸಿದ ಅವರು, ‘ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಬ್ಯಾಂಕ್ಗಳು, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಕನ್ನಡ ತಿಳಿದಿಲ್ಲ. ಇದರಿಂದಾಗಿ ಕೇವಲ ಕನ್ನಡವನ್ನಷ್ಟೇ ತಿಳಿದಿರುವ ಜನರಿಗೆ ಸಮಸ್ಯೆ ಆಗುತ್ತಿದೆ. ಇದು ಖಂಡಿತವಾಗಿಯೂ ಸಾಮಾನ್ಯ ವ್ಯಕ್ತಿಯೊಬ್ಬನಿಗೆ ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಅಡ್ಡಿಯಾಗಲಿದೆ’ ಎಂದರು.