ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಂಚಿ| ನೂಪುರ್‌, ಜಿಂದಾಲ್‌ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ: ಇಬ್ಬರು ಸಾವು

Last Updated 11 ಜೂನ್ 2022, 3:05 IST
ಅಕ್ಷರ ಗಾತ್ರ

ರಾಂಚಿ: ಪ್ರವಾದಿ ಮಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ರಾಂಚಿಯಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಎರಡೂ ಕಡೆಯಿಂದ (ಪ್ರತಿಭಟನಾಕಾರರು ಹಾಗೂ ಪೊಲೀಸರು) ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ‌

ಸ್ವಲ್ಪ ಉದ್ವಿಗ್ನತೆ ಇದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ರಾಂಚಿ ಡಿಐಜಿ ಅನೀಶ್ ಗುಪ್ತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT