‘ಪವಿತ್ರವಾದ ಗಣರಾಜ್ಯೋತ್ಸವ ದಿನದಂದು, ದೆಹಲಿಯಲ್ಲಿ ನಡೆದ ಹಿಂಸೆ ಹಾಗೂ ಘರ್ಷಣೆ ವಿಷಾದನೀಯ’ ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯಾಜಿ ಪ್ರಕಟಣೆಯಲ್ಲಿ ಹೇಳಿದ್ದಾರೆ.ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಬದಲಾಗಿ ಅನ್ಯ ಧ್ವಜವನ್ನು ಹಾರಿಸುವುದು ದುರದೃಷ್ಟಕರ ವರ್ತನೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ದೇಶದ ಎಲ್ಲ ಜನರೂ ರಾಜಕೀಯ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹೊರಬಂದು, ಶಾಂತಿಗೆ ಆದ್ಯತೆ ನೀಡಬೇಕು ಎಂದು ಆರ್ಎಸ್ಎಸ್ ಹೇಳಿದೆ.