<p><strong>ನವದೆಹಲಿ</strong>: ಕೋವಿಡ್–19 ಸಾಂಕ್ರಾಮಿಕಕ್ಕೆ ತುತ್ತಾಗಿ 229 ಮಂದಿ ತೆರಿಗೆ ಅಧಿಕಾರಿಗಳು ತಮ್ಮ ಜೀವ ಕಳೆದುಕೊಂಡಿದ್ದು, ದೇಶವು ಅವರ ಕರ್ತವ್ಯಪರತೆಯನ್ನು ಸ್ಮರಿಸಲಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.</p>.<p>ಪರೋಕ್ಷ ತೆರಿಗೆಗಳ ಕೇಂದ್ರೀಯ ಮಂಡಳಿಯ (ಸಿಬಿಐಸಿ) 110 ಅಧಿಕಾರಿಗಳು ಹಾಗೂ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ (ಸಿಬಿಡಿಟಿ) 119 ಅಧಿಕಾರಿಗಳು ತಮ್ಮ ಕರ್ತವ್ಯದ ಸಂದರ್ಭದಲ್ಲಿ ಕೋವಿಡ್ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಬಿಕ್ಕಟ್ಟಿನ ಈ ಸಂದರ್ಭದಲ್ಲಿ ದೇಶ ಸೇವೆಯಲ್ಲಿ ಪ್ರಾಣವನ್ನು ಪಣಕ್ಕಿಡುತ್ತಿದ್ದೀರಿ. ನಿಮ್ಮ ಸೇವೆಯ ಕಾರಣದಿಂದಾಗಿಯೇ ವಿವಿಧ ಬಂದರುಗಳಲ್ಲಿ ಆಮ್ಲಜನಕ ಸಿಲಿಂಡರ್ನಂತಹ ಅತ್ಯಗತ್ಯ ವೈದ್ಯಕೀಯ ಉಪಕರಣಗಳು ದೇಶದೊಳಕ್ಕೆ ತ್ವರಿತವಾಗಿ ಪೂರೈಕೆ ಆಗುತ್ತಿದೆ’ ಎಂದು ತೆರಿಗೆ ಅಧಿಕಾರಿಗಳ ಕಾರ್ಯವೈಖರಿಗೆ ಇದೇ ವೇಳೆ ಅವರು ಮೆಚ್ಚುಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್–19 ಸಾಂಕ್ರಾಮಿಕಕ್ಕೆ ತುತ್ತಾಗಿ 229 ಮಂದಿ ತೆರಿಗೆ ಅಧಿಕಾರಿಗಳು ತಮ್ಮ ಜೀವ ಕಳೆದುಕೊಂಡಿದ್ದು, ದೇಶವು ಅವರ ಕರ್ತವ್ಯಪರತೆಯನ್ನು ಸ್ಮರಿಸಲಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.</p>.<p>ಪರೋಕ್ಷ ತೆರಿಗೆಗಳ ಕೇಂದ್ರೀಯ ಮಂಡಳಿಯ (ಸಿಬಿಐಸಿ) 110 ಅಧಿಕಾರಿಗಳು ಹಾಗೂ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ (ಸಿಬಿಡಿಟಿ) 119 ಅಧಿಕಾರಿಗಳು ತಮ್ಮ ಕರ್ತವ್ಯದ ಸಂದರ್ಭದಲ್ಲಿ ಕೋವಿಡ್ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಬಿಕ್ಕಟ್ಟಿನ ಈ ಸಂದರ್ಭದಲ್ಲಿ ದೇಶ ಸೇವೆಯಲ್ಲಿ ಪ್ರಾಣವನ್ನು ಪಣಕ್ಕಿಡುತ್ತಿದ್ದೀರಿ. ನಿಮ್ಮ ಸೇವೆಯ ಕಾರಣದಿಂದಾಗಿಯೇ ವಿವಿಧ ಬಂದರುಗಳಲ್ಲಿ ಆಮ್ಲಜನಕ ಸಿಲಿಂಡರ್ನಂತಹ ಅತ್ಯಗತ್ಯ ವೈದ್ಯಕೀಯ ಉಪಕರಣಗಳು ದೇಶದೊಳಕ್ಕೆ ತ್ವರಿತವಾಗಿ ಪೂರೈಕೆ ಆಗುತ್ತಿದೆ’ ಎಂದು ತೆರಿಗೆ ಅಧಿಕಾರಿಗಳ ಕಾರ್ಯವೈಖರಿಗೆ ಇದೇ ವೇಳೆ ಅವರು ಮೆಚ್ಚುಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>