<p><strong>ನವದೆಹಲಿ (ಪಿಟಿಐ): </strong>ಅನುಕೂಲಕರ ವಾತಾವರಣ ಮತ್ತು ಬಿತ್ತನೆ ಪ್ರದೇಶದಲ್ಲಿ ಏರಿಕೆ ಆಗಿರುವುದರಿಂದ ಪ್ರಸಕ್ತ ಹಿಂಗಾರು ಅವಧಿಯಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯು ಉತ್ತಮವಾಗಿರುವ ನಿರೀಕ್ಷೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಹಿಂಗಾರು ಅವಧಿಯಲ್ಲಿ ಈವರೆಗೆ 24.13 ಲಕ್ಷ ಹೆಕ್ಟೇರ್ನಷ್ಟು ಹೆಚ್ಚು ಪ್ರದೇಶದಲ್ಲಿ ಬಿತ್ತನೆ ಆಗಿದೆ ಎಂದು ತಿಳಿಸಿದರು.</p>.<p>ನವೆಂಬರ್ 25ರವರೆಗಿನ ಮಾಹಿತಿಯ ಪ್ರಕಾರ, 358.59 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಅವಧಿಯ ಆಹಾರಧಾನ್ಯಗಳ ಬಿತ್ತನೆ ಕಾರ್ಯ ನಡೆದಿದೆ. ಕಳೆದ ವರ್ಷ 334.46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ 24.13 ಲಕ್ಷ ಹೆಕ್ಟೇರ್ ಹೆಚ್ಚುವರಿ ಪ್ರದೇಶದಲ್ಲಿ ಬಿತ್ತನೆ ಆಗಿದೆ.</p>.<p>ಹಿಂಗಾರು ಹಂಗಾಮಿನ ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ತೋಮರ್ ಅವರು ಶನಿವಾರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.</p>.<p>ಗೋಧಿ ಬಿತ್ತನೆ ಪ್ರದೇಶವು 138.35 ಲಕ್ಷ ಹೆಕ್ಟೇರ್ಗಳಿಂದ 152.88 ಲಕ್ಷ ಹೆಕ್ಟೇರ್ಗೆ ಏರಿಕೆ ಆಗಿದೆ. ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಗರಿಷ್ಠ ಪ್ರದೇಶದಲ್ಲಿ ಬಿತ್ತನೆ ಆಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಬಿಹಾರ, ಗುಜರಾತ್, ಜಮ್ಮು–ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ಹೆಚ್ಚಿನ ಪ್ರದೇಶದಲ್ಲಿ ಗೋಧಿ ಬಿತ್ತನೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಅನುಕೂಲಕರ ವಾತಾವರಣ ಮತ್ತು ಬಿತ್ತನೆ ಪ್ರದೇಶದಲ್ಲಿ ಏರಿಕೆ ಆಗಿರುವುದರಿಂದ ಪ್ರಸಕ್ತ ಹಿಂಗಾರು ಅವಧಿಯಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯು ಉತ್ತಮವಾಗಿರುವ ನಿರೀಕ್ಷೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಹಿಂಗಾರು ಅವಧಿಯಲ್ಲಿ ಈವರೆಗೆ 24.13 ಲಕ್ಷ ಹೆಕ್ಟೇರ್ನಷ್ಟು ಹೆಚ್ಚು ಪ್ರದೇಶದಲ್ಲಿ ಬಿತ್ತನೆ ಆಗಿದೆ ಎಂದು ತಿಳಿಸಿದರು.</p>.<p>ನವೆಂಬರ್ 25ರವರೆಗಿನ ಮಾಹಿತಿಯ ಪ್ರಕಾರ, 358.59 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಅವಧಿಯ ಆಹಾರಧಾನ್ಯಗಳ ಬಿತ್ತನೆ ಕಾರ್ಯ ನಡೆದಿದೆ. ಕಳೆದ ವರ್ಷ 334.46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ 24.13 ಲಕ್ಷ ಹೆಕ್ಟೇರ್ ಹೆಚ್ಚುವರಿ ಪ್ರದೇಶದಲ್ಲಿ ಬಿತ್ತನೆ ಆಗಿದೆ.</p>.<p>ಹಿಂಗಾರು ಹಂಗಾಮಿನ ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ತೋಮರ್ ಅವರು ಶನಿವಾರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.</p>.<p>ಗೋಧಿ ಬಿತ್ತನೆ ಪ್ರದೇಶವು 138.35 ಲಕ್ಷ ಹೆಕ್ಟೇರ್ಗಳಿಂದ 152.88 ಲಕ್ಷ ಹೆಕ್ಟೇರ್ಗೆ ಏರಿಕೆ ಆಗಿದೆ. ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಗರಿಷ್ಠ ಪ್ರದೇಶದಲ್ಲಿ ಬಿತ್ತನೆ ಆಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಬಿಹಾರ, ಗುಜರಾತ್, ಜಮ್ಮು–ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ಹೆಚ್ಚಿನ ಪ್ರದೇಶದಲ್ಲಿ ಗೋಧಿ ಬಿತ್ತನೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>