ಯಾವುದೇ ಸಮುದಾಯದ ಬಡವರು, ಹಿಂದುಳಿದವರು ಮಾತ್ರ ಮೀಸಲಾತಿ ಸೌಲಭ್ಯ ಪಡೆಯಬೇಕು. ಆದರೆ, ಅನರ್ಹರೇ ಮೀಸಲಾತಿ ಪಡೆಯುತ್ತಿರುವುದು ಹೆಚ್ಚುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಆರ್ಥಿಕವಾಗಿ ಸಶಕ್ತರಾಗಿ ಇರುವವರೇ ಪಡೆಯುತ್ತಿದ್ದಾರೆ. ಅದನ್ನು ತಪ್ಪಿಸಲು ಕ್ರಮದ ಅಗತ್ಯವಿದೆ ಎಂದರು.