ನವದೆಹಲಿ: ‘ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಖಾತ್ರಿಪಡಿಸುವ ಉದಾತ್ತ ಸಂವಿಧಾನದ ಆಶಯಗಳನ್ನು ಸಾಧಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೇನೆ’ ಎಂದಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರನ್ನು 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ಮರಿಸೋಣ ಎಂದು ಹೇಳಿದ್ದಾರೆ.
‘ಸ್ವಾತಂತ್ರ್ಯ ದಿನಾಚರಣೆಯ ಈ ಸಂತೋಷದಾಯಕ ಸಂದರ್ಭದಲ್ಲಿ ನಮ್ಮ ಆಂತರಿಕ ಶಕ್ತಿ ಮತ್ತು ಸಾಮರ್ಥ್ಯವನ್ನು ಅರಿತುಕೊಳ್ಳಬೇಕು. ರಾಷ್ಟ್ರದ ಅಭಿವೃದ್ಧಿಗಾಗಿ ನಮ್ಮನ್ನು ನಾವು ಸಮರ್ಪಣೆ ಮಾಡೋಣ’ ಎಂದು ತಿಳಿಸಿದ್ದಾರೆ.