<p><strong>ಕೀವ್</strong>: ಪೂರ್ವ ಯೂರೋಪ್ ರಾಷ್ಟ್ರ ಉಕ್ರೇನ್ನಲ್ಲಿ ಉಳಿಯುವುದು ತೀರಾ ಅಗತ್ಯವಲ್ಲದಿದ್ದರೆ, ಭಾರತೀಯ ವಿದ್ಯಾರ್ಥಿಗಳು ಮತ್ತು ಪ್ರಜೆಗಳು ಕೂಡಲೇ ಭಾರತಕ್ಕೆ ಹಿಂದಿರುಗಬೇಕು ಎಂದು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾನುವಾರ ಹೇಳಿದೆ.</p>.<p>ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಭಾರತೀಯರು ಯಾವುದೇ ವಾಣಿಜ್ಯ ವಿಮಾನ ಅಥವಾ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಹಿಂದಿರುಗಬಹುದು ಎಂದು ಅದು ತಿಳಿಸಿದೆ.</p>.<p>‘ಉಕ್ರೇನ್ನಲ್ಲಿನ ಪರಿಸ್ಥಿತಿ ಉದ್ವಿಗ್ನತೆ ಮತ್ತು ಅನಿಶ್ಚಿತತೆಗಳಿಂದ ಕೂಡಿದೆ. ಹೀಗಾಗಿ ಇಲ್ಲಿ ಉಳಿದುಕೊಳ್ಳುವುದು ಅನಿವಾರ್ಯವಲ್ಲ ಎಂದಾದರೆ, ಭಾರತೀಯ ಪ್ರಜೆಗಳು ಮತ್ತು ಭಾರತೀಯ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ಉಕ್ರೇನ್ನಿಂದ ಹೊರಹೋಗುವಂತೆ ಸೂಚಿಸಲಾಗುತ್ತಿದೆ’ ಎಂದು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಭಾರತೀಯ ವಿದ್ಯಾರ್ಥಿಗಳು ಚಾರ್ಟರ್ ಫ್ಲೈಟ್ಗಳ ಮಾಹಿತಿಗಳನ್ನು ಪಡೆಯುವಂತೆಯೂ, ರಾಯಭಾರ ಕಚೇರಿಯ ಫೇಸ್ಬುಕ್, ವೆಬ್ಸೈಟ್ ಮತ್ತು ಟ್ವಿಟರ್ಗಳ ಮೇಲೆ ಗಮನ ಇಟ್ಟಿರುವಂತೆಯೂ ಸೂಚಿಸಲಾಗಿದೆ.</p>.<p>ಮಾಹಿತಿ ಮತ್ತು ಸಹಾಯದ ಅಗತ್ಯವಿರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಥವಾ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.</p>.<p>ಉಕ್ರೇನ್ನಲ್ಲಿರುವ ಭಾರತೀಯರಿಗೆ ವಿಮಾನದ ಟಿಕೆಟ್ಗಳು ಸಿಗುತ್ತಿಲ್ಲ ಎಂಬ ಸಂಗತಿ ಈ ವಾರದ ಆರಂಭದಲ್ಲಿ ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೀವ್</strong>: ಪೂರ್ವ ಯೂರೋಪ್ ರಾಷ್ಟ್ರ ಉಕ್ರೇನ್ನಲ್ಲಿ ಉಳಿಯುವುದು ತೀರಾ ಅಗತ್ಯವಲ್ಲದಿದ್ದರೆ, ಭಾರತೀಯ ವಿದ್ಯಾರ್ಥಿಗಳು ಮತ್ತು ಪ್ರಜೆಗಳು ಕೂಡಲೇ ಭಾರತಕ್ಕೆ ಹಿಂದಿರುಗಬೇಕು ಎಂದು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾನುವಾರ ಹೇಳಿದೆ.</p>.<p>ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಭಾರತೀಯರು ಯಾವುದೇ ವಾಣಿಜ್ಯ ವಿಮಾನ ಅಥವಾ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಹಿಂದಿರುಗಬಹುದು ಎಂದು ಅದು ತಿಳಿಸಿದೆ.</p>.<p>‘ಉಕ್ರೇನ್ನಲ್ಲಿನ ಪರಿಸ್ಥಿತಿ ಉದ್ವಿಗ್ನತೆ ಮತ್ತು ಅನಿಶ್ಚಿತತೆಗಳಿಂದ ಕೂಡಿದೆ. ಹೀಗಾಗಿ ಇಲ್ಲಿ ಉಳಿದುಕೊಳ್ಳುವುದು ಅನಿವಾರ್ಯವಲ್ಲ ಎಂದಾದರೆ, ಭಾರತೀಯ ಪ್ರಜೆಗಳು ಮತ್ತು ಭಾರತೀಯ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ಉಕ್ರೇನ್ನಿಂದ ಹೊರಹೋಗುವಂತೆ ಸೂಚಿಸಲಾಗುತ್ತಿದೆ’ ಎಂದು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಭಾರತೀಯ ವಿದ್ಯಾರ್ಥಿಗಳು ಚಾರ್ಟರ್ ಫ್ಲೈಟ್ಗಳ ಮಾಹಿತಿಗಳನ್ನು ಪಡೆಯುವಂತೆಯೂ, ರಾಯಭಾರ ಕಚೇರಿಯ ಫೇಸ್ಬುಕ್, ವೆಬ್ಸೈಟ್ ಮತ್ತು ಟ್ವಿಟರ್ಗಳ ಮೇಲೆ ಗಮನ ಇಟ್ಟಿರುವಂತೆಯೂ ಸೂಚಿಸಲಾಗಿದೆ.</p>.<p>ಮಾಹಿತಿ ಮತ್ತು ಸಹಾಯದ ಅಗತ್ಯವಿರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಥವಾ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.</p>.<p>ಉಕ್ರೇನ್ನಲ್ಲಿರುವ ಭಾರತೀಯರಿಗೆ ವಿಮಾನದ ಟಿಕೆಟ್ಗಳು ಸಿಗುತ್ತಿಲ್ಲ ಎಂಬ ಸಂಗತಿ ಈ ವಾರದ ಆರಂಭದಲ್ಲಿ ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>