<p><strong>ನವದೆಹಲಿ: </strong>ಆಕ್ಸ್ಫರ್ಡ್ ಯುನಿವರ್ಸಿಟಿ ಹಾಗೂ ಅಸ್ಟ್ರಾಜೆನೆಕಾ ಸಂಸ್ಥೆಗಳು ಕೋವಿಡ್–19ಗೆ ಅಭಿವೃದ್ಧಿಪಡಿಸಿದ ‘ಕೋವಿಶೀಲ್ಡ್’ ಲಸಿಕೆಯನ್ನು ಭಾರತದಲ್ಲಿ ತುರ್ತು ಸಂದರ್ಭದ ಬಳಕೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ತಿಳಿಸಿದ್ದಾರೆ.</p>.<p>ತುರ್ತು ಸಂದರ್ಭದಲ್ಲಿ ಲಸಿಕೆ ಬಳಕೆಗೆ ತಜ್ಞರ ಸಮಿತಿಯು ಒಪ್ಪಿಗೆ ನೀಡಿದ್ದು ಇದಕ್ಕೆ ಭಾರತ ಸರ್ಕಾರ ಅನುಮೋದನೆ ಸೂಚಿಸಿದೆ ಎಂದು ಸಚಿವರು ತಿಳಿಸಿದರು.</p>.<p>ಭಾರತದಲ್ಲಿ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸಂಸ್ಥೆ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುತ್ತಿದೆ. ಭಾರತದಲ್ಲಿ ಮೊದಲಿಗೆ ಅನುಮೋದನೆ ಪಡೆದ ಲಸಿಕೆ ಇದಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p>ನಾಲ್ಕು ಲಸಿಕೆಗಳನ್ನು ಅಭಿವೃದ್ಧಿಪಡಿಸಿದ ಜಗತ್ತಿನ ಏಕೈಕ ದೇಶ ಭಾರತವಾಗಿದೆ. ಇನ್ನು ಮೂರು ಲಸಿಕೆಗಳು ತುರ್ತು ಬಳಕೆಯ ಅನುಮೋದನೆಗಾಗಿ ಕಾಯತ್ತಿವೆ. ತಜ್ಞರ ಸಮಿತಿಯು ದತ್ತಾಂಶಗಳನ್ನು ಪರಿಶೀಲನೆ ಮಾಡುತ್ತಿದ್ದು ಒಪ್ಪಿಗೆ ಸೂಚಿಸಿದ ಕೂಡಲೇ ಅನುಮೋದನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆಕ್ಸ್ಫರ್ಡ್ ಯುನಿವರ್ಸಿಟಿ ಹಾಗೂ ಅಸ್ಟ್ರಾಜೆನೆಕಾ ಸಂಸ್ಥೆಗಳು ಕೋವಿಡ್–19ಗೆ ಅಭಿವೃದ್ಧಿಪಡಿಸಿದ ‘ಕೋವಿಶೀಲ್ಡ್’ ಲಸಿಕೆಯನ್ನು ಭಾರತದಲ್ಲಿ ತುರ್ತು ಸಂದರ್ಭದ ಬಳಕೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ತಿಳಿಸಿದ್ದಾರೆ.</p>.<p>ತುರ್ತು ಸಂದರ್ಭದಲ್ಲಿ ಲಸಿಕೆ ಬಳಕೆಗೆ ತಜ್ಞರ ಸಮಿತಿಯು ಒಪ್ಪಿಗೆ ನೀಡಿದ್ದು ಇದಕ್ಕೆ ಭಾರತ ಸರ್ಕಾರ ಅನುಮೋದನೆ ಸೂಚಿಸಿದೆ ಎಂದು ಸಚಿವರು ತಿಳಿಸಿದರು.</p>.<p>ಭಾರತದಲ್ಲಿ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸಂಸ್ಥೆ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುತ್ತಿದೆ. ಭಾರತದಲ್ಲಿ ಮೊದಲಿಗೆ ಅನುಮೋದನೆ ಪಡೆದ ಲಸಿಕೆ ಇದಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p>ನಾಲ್ಕು ಲಸಿಕೆಗಳನ್ನು ಅಭಿವೃದ್ಧಿಪಡಿಸಿದ ಜಗತ್ತಿನ ಏಕೈಕ ದೇಶ ಭಾರತವಾಗಿದೆ. ಇನ್ನು ಮೂರು ಲಸಿಕೆಗಳು ತುರ್ತು ಬಳಕೆಯ ಅನುಮೋದನೆಗಾಗಿ ಕಾಯತ್ತಿವೆ. ತಜ್ಞರ ಸಮಿತಿಯು ದತ್ತಾಂಶಗಳನ್ನು ಪರಿಶೀಲನೆ ಮಾಡುತ್ತಿದ್ದು ಒಪ್ಪಿಗೆ ಸೂಚಿಸಿದ ಕೂಡಲೇ ಅನುಮೋದನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>