ನವದೆಹಲಿ: ಮರಣದಂಡನೆಗೆ ಗುರಿಯಾಗಿರುವ, ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಯಾದವ್ ಅವರಿಗೆ ಮೇಲ್ಮನವಿ ಸಲ್ಲಿಸಲು ಹಾಗೂ ಕಾನ್ಸುಲರ್ ಕಚೇರಿ ನೆರವು ನೀಡುವುದಕ್ಕೆ ಸಂಬಂಧಿಸಿ ಪಾಕಿಸ್ತಾನದ ಸಂಸತ್ ಅನುಮೋದಿಸಿರುವ ಮಸೂದೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಭಾರತ ಗುರುವಾರ ಒತ್ತಾಯಿಸಿದೆ.