ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌: ಮಸೂದೆಯಲ್ಲಿನ ನ್ಯೂನತೆ ಸರಿಸಡಿಸಲು ಭಾರತ ಒತ್ತಾಯ

ಕುಲಭೂಷಣ್‌ ಜಾಧವ್‌ ಪ್ರಕರಣ
Last Updated 17 ಜೂನ್ 2021, 17:07 IST
ಅಕ್ಷರ ಗಾತ್ರ

ನವದೆಹಲಿ: ಮರಣದಂಡನೆಗೆ ಗುರಿಯಾಗಿರುವ, ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್‌ ಯಾದವ್‌ ಅವರಿಗೆ ಮೇಲ್ಮನವಿ ಸಲ್ಲಿಸಲು ಹಾಗೂ ಕಾನ್ಸುಲರ್‌ ಕಚೇರಿ ನೆರವು ನೀಡುವುದಕ್ಕೆ ಸಂಬಂಧಿಸಿ ಪಾಕಿಸ್ತಾನದ ಸಂಸತ್‌ ಅನುಮೋದಿಸಿರುವ ಮಸೂದೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಭಾರತ ಗುರುವಾರ ಒತ್ತಾಯಿಸಿದೆ.

‘ಈ ಮಸೂದೆಯಲ್ಲಿ ಹಲವಾರು ನ್ಯೂನತೆಗಳಿವೆ. ಅಂತರರಾಷ್ಟ್ರೀಯ ನ್ಯಾಯಾಲಯ ನೀಡಿರುವ ತೀರ್ಪಿಗೆ ಅನುಗುಣವಾಗಿರುವಂತೆ ಮಸೂದೆಯನ್ನು ಸರಿಪಡಿಸಬೇಕು ಎಂದು ಪಾಕಿಸ್ತಾನ ಸರ್ಕಾರವನ್ನು ಭಾರತ ಒತ್ತಾಯಿಸಿದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಹೇಳಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯಾಲಯದ ತೀರ್ಪಿನನ್ವಯ ಪಾಕಿಸ್ತಾನದ ಸಂಸತ್‌ ಇತ್ತೀಚೆಗೆ ‘ಅಂತರರಾಷ್ಟ್ರೀಯ ನ್ಯಾಯಾಲಯ (ಮರುಪರಿಶೀಲನೆ ಹಾಗೂ ಮರುಪರಿಗಣನೆ) ಮಸೂದೆ–2020’ ಅನ್ನು ಅನುಮೋದಿಸಿದೆ.

ಕುಲಭೂಷಣ್‌ ಜಾಧವ್‌ ಅವರಿಗೆ ಕಾನ್ಸುಲರ್‌ ಕಚೇರಿಯ ನೆರವು ಒದಗಿಸುವುದಕ್ಕೆ ಸಂಬಂಧಿಸಿ ಪಕ್ಷಪಾತ ಎಸಗಲಾಗಿದೆಯೇ ಎಂಬುದರ ಕುರಿತು ಕೆಳ ಹಂತದ ನ್ಯಾಯಾಲಯಗಳು ವಿಚಾರಣೆ ನಡೆಸಲು ಈ ಮಸೂದೆ ಅನುವು ಮಾಡಿಕೊಡುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT