<p><strong>ನವದೆಹಲಿ:</strong> ಪೂರ್ವ ಲಡಾಖ್ನಲ್ಲಿ ಚೀನಾ ಜೊತೆಗಿನ ಗಡಿ ಬಿಕ್ಕಟ್ಟಿನಲ್ಲಿ ಭಾರತವನ್ನು ಪರೀಕ್ಷಿಸಲಾಗುತ್ತಿದ್ದು, ಈ ಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಿರುವ ಭಾರತವು ರಾಷ್ಟ್ರೀಯ ಭದ್ರತಾ ಸವಾಲನ್ನು ನಿಭಾಯಿಸಲಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಶನಿವಾರ ಹೇಳಿದರು.</p>.<p>ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕಿ) ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಜೈಶಂಕರ್, ಪೂರ್ವ ಲಡಾಖ್ನಲ್ಲಿ ನಡೆದ ಘಟನೆಯು ಚೀನಾ ಹಿತಾಸಕ್ತಿಗೆ ಪೂರಕವಾಗಿರಲಿಲ್ಲ. ಆದರೆ ಭಾರತದ ಜನರ ಭಾವನೆಯ ಮೇಲೆ ತೀವ್ರವಾಗಿ ಪರಿಣಾಮ ಬೀರಿತ್ತು’ ಎಂದರು.</p>.<p>ವಾಸ್ತವ ನಿಯಂತ್ರಣ ರೇಖೆಯಲ್ಲಿ(ಎಲ್ಎಸಿ) ನಡೆದ ಘಟನೆಯು ದುಗುಡಗೊಳಿಸುವಂತಹದು ಎಂದು ಉಲ್ಲೇಖಿಸಿದ ಜೈಶಂಕರ್, ‘ಎರಡೂ ರಾಷ್ಟ್ರಗಳ ನಡುವೆ ಉತ್ತಮ ಸಂಬಂಧಕ್ಕೆ ಎರಡೂ ಕಡೆಯಿಂದಲೂ ಹೆಚ್ಚಿನ ಕೆಲಸಗಳು ನಡೆದಿವೆ. ಆದರೆ ಈ ವರ್ಷ ನಡೆದ ಘಟನೆಯು ಇದಕ್ಕೆ ಪೂರಕವಾಗಿರಲಿಲ್ಲ. ಇಷ್ಟು ವರ್ಷಗಳಿಂದ ಕಾಪಾಡಿಕೊಂಡು ಬಂದಂತಹ ಸೌಹಾರ್ದತೆಯು ನಾಶವಾಗುತ್ತದೆಯೇ ಎನ್ನುವ ಆತಂಕ ಎದುರಾಗಿದೆ. ಹೌದು, ನಮ್ಮನ್ನು ಪರೀಕ್ಷಿಸಲಾಗುತ್ತಿದೆ. ಇದನ್ನು ಮೆಟ್ಟಿನಿಲ್ಲುವ ಭರವಸೆಯು ನನಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ಲಡಾಖ್ನಲ್ಲಿ ಚೀನಾ ಜೊತೆಗಿನ ಗಡಿ ಬಿಕ್ಕಟ್ಟಿನಲ್ಲಿ ಭಾರತವನ್ನು ಪರೀಕ್ಷಿಸಲಾಗುತ್ತಿದ್ದು, ಈ ಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಿರುವ ಭಾರತವು ರಾಷ್ಟ್ರೀಯ ಭದ್ರತಾ ಸವಾಲನ್ನು ನಿಭಾಯಿಸಲಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಶನಿವಾರ ಹೇಳಿದರು.</p>.<p>ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕಿ) ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಜೈಶಂಕರ್, ಪೂರ್ವ ಲಡಾಖ್ನಲ್ಲಿ ನಡೆದ ಘಟನೆಯು ಚೀನಾ ಹಿತಾಸಕ್ತಿಗೆ ಪೂರಕವಾಗಿರಲಿಲ್ಲ. ಆದರೆ ಭಾರತದ ಜನರ ಭಾವನೆಯ ಮೇಲೆ ತೀವ್ರವಾಗಿ ಪರಿಣಾಮ ಬೀರಿತ್ತು’ ಎಂದರು.</p>.<p>ವಾಸ್ತವ ನಿಯಂತ್ರಣ ರೇಖೆಯಲ್ಲಿ(ಎಲ್ಎಸಿ) ನಡೆದ ಘಟನೆಯು ದುಗುಡಗೊಳಿಸುವಂತಹದು ಎಂದು ಉಲ್ಲೇಖಿಸಿದ ಜೈಶಂಕರ್, ‘ಎರಡೂ ರಾಷ್ಟ್ರಗಳ ನಡುವೆ ಉತ್ತಮ ಸಂಬಂಧಕ್ಕೆ ಎರಡೂ ಕಡೆಯಿಂದಲೂ ಹೆಚ್ಚಿನ ಕೆಲಸಗಳು ನಡೆದಿವೆ. ಆದರೆ ಈ ವರ್ಷ ನಡೆದ ಘಟನೆಯು ಇದಕ್ಕೆ ಪೂರಕವಾಗಿರಲಿಲ್ಲ. ಇಷ್ಟು ವರ್ಷಗಳಿಂದ ಕಾಪಾಡಿಕೊಂಡು ಬಂದಂತಹ ಸೌಹಾರ್ದತೆಯು ನಾಶವಾಗುತ್ತದೆಯೇ ಎನ್ನುವ ಆತಂಕ ಎದುರಾಗಿದೆ. ಹೌದು, ನಮ್ಮನ್ನು ಪರೀಕ್ಷಿಸಲಾಗುತ್ತಿದೆ. ಇದನ್ನು ಮೆಟ್ಟಿನಿಲ್ಲುವ ಭರವಸೆಯು ನನಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>