'ಭಾರತದ ಸಂವಿಧಾನದಲ್ಲಿ ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ಹೇಳಲಾಗಿದೆಯೇ ಹೊರತು ರಾಷ್ಟ್ರ ಎಂದು ಅಲ್ಲ. ಭಾರತದಲ್ಲಿ ಒಬ್ಬ ವ್ಯಕ್ತಿ ರಾಜ್ಯಗಳ ಜನತೆಯ ಮೇಲೆ ಆಡಳಿತ ನಡೆಸಲು ಸಾಧ್ಯವಿಲ್ಲ. ಭಿನ್ನ ಭಾಷೆಗಳು ಹಾಗೂ ಸಂಸ್ಕೃತಿಯ ವೈವಿಧ್ಯತೆಯನ್ನು ದಮನಿಸಲು ಸಾಧ್ಯವಿಲ್ಲ. ಇದೊಂದು ಸಹಭಾಗಿತ್ವವೇ ಹೊರತು, ಅಧಿಪತ್ಯ ಅಲ್ಲ' ಎಂದು ರಾಹುಲ್ ಗಾಂಧಿ ಗುಡುಗಿದರು.