ತ್ವರಿತವಾಗಿ ಗಡಿಯಿಂದ ಸೇನೆಯನ್ನು ಹಿಂದಕ್ಕೆ ಪಡೆಯಬೇಕು, ಬಿಕ್ಕಟ್ಟು ಶಮನಗೊಳಿಸುವ ಪ್ರಯತ್ನಕ್ಕೆ ಭಂಗ ತರುವ ಯಾವುದೇ ಕ್ರಮಗಳಿಗೆ ಮುಂದಾಗಬಾರದು, ಗಡಿಗೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವಿನ ಒಪ್ಪಂದದಲ್ಲಿ ಉಲ್ಲೇಖಿಸಿದ ಪ್ರಕಾರ ಎರಡೂ ದೇಶಗಳ ಯೋಧರು ನಿರ್ದಿಷ್ಟ ಅಂತರದಲ್ಲಿ ಇರಬೇಕು, ಗಡಿ ನಿರ್ವಹಣೆಗೆ ಸಂಬಂಧಿಸಿದ ಶಿಷ್ಟಾಚಾರ ಪಾಲಿಸಬೇಕು ಎಂಬ ಅಂಶಗಳಿಗೆ ಸಚಿವರು ಒಪ್ಪಿಗೆ ನೀಡಿದರು.