ಮಾತುಕತೆ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಸೇನೆ, ‘ಬಾಕಿ ಉಳಿದಿರುವ ಪ್ರದೇಶಗಳಲ್ಲಿನ ಸೇನೆಯನ್ನು ವಾಪಸ್ ಕರೆಯಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಯಾವುದೇ ರೀತಿಯ ಘಟನೆಗಳು ನಡೆಯದಂತೆ ಸ್ಥಿರತೆಯನ್ನು ಕಾಪಾಡಲು ಉಭಯ ದೇಶಗಳು ಒಪ್ಪಿಕೊಂಡಿವೆ. ಜತೆಗೆ, ಬಾಕಿ ಉಳಿದಿರುವ ಬಿಕ್ಕಟುಗಳ ಬಗ್ಗೆ ಶೀಘ್ರ ಇತ್ಯರ್ಥಗೊಳಿಸಲು ಒಪ್ಪಿವೆ’ ಎಂದು ತಿಳಿಸಿದೆ.