‘ಭಾರತ ಯಾವಾಗಲೂ ಹಿಂಸೆ ಮತ್ತು ಉಗ್ರವಾದದ ವಿರುದ್ಧ ನಿಲ್ಲುತ್ತದೆ. ನಾವು ಸಲ್ಮಾನ್ ರಶ್ದಿ ಅವರ ಮೇಲಿನ ಭೀಕರ ದಾಳಿಯನ್ನು ಖಂಡಿಸುತ್ತೇವೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಮ್ಮ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.