ಜಾಗತಿಕ ಮಹತ್ವ ಪಡೆದಿರುವ ಮುಖ್ಯ ವಿಚಾರಗಳನ್ನು ಪ್ರಸ್ತಾಪಿಸಿದ ಅವರು, 'ಈಚಿನ ದಿನಗಳಲ್ಲಿ ಉದ್ಭವಿಸಿರುವ ಬಿಕ್ಕಟ್ಟುಗಳು ಭಾರತದ ದೂರಗಾಮಿ ಯೋಜನೆಗಳ ಅನುಷ್ಠಾನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಇಂಡೊ-ಪೆಸಿಫಿಕ್ ವಲಯದಲ್ಲಿ ಮುಕ್ತ ಮತ್ತು ಎಲ್ಲರನ್ನೂ ಒಳಗೊಳ್ಳುವ ಪರಿಸ್ಥಿತಿ ರೂಪುಗೊಳ್ಳಬೇಕು ಎಂಬ ಬಗ್ಗೆ ಭಾರತದ ಬದ್ಧತೆಯೂ ಬದಲಾಗಿಲ್ಲ' ಎಂದು ಮಾಹಿತಿ ನೀಡಿದರು.