<p><strong>ನವದೆಹಲಿ:</strong> ಚೀನಾ ಗಡಿಯಲ್ಲಿ ಭಾರತವು ಈವರೆಗಿನ ಅತಿದೊಡ್ಡ ಬಿಕ್ಕಟ್ಟನ್ನು ಕೊರೊನಾ ಸಂಕಷ್ಟದ ನಡುವೆಯೂ ದೃಢವಾಗಿ ಮತ್ತು ಪ್ರಬುದ್ಧವಾಗಿ ಎದುರಿಸಿತು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಹೇಳಿದರು.</p>.<p>ಪ್ಯಾರೀಸ್ನ ಚಿಂತಕರ ಚಾವಡಿಯ ವೇದಿಕೆಯಲ್ಲಿ ಮಾತನಾಡಿದ ಶ್ರಿಂಗ್ಲಾ, ಫ್ರಾನ್ಸ್ನಲ್ಲಿ ಈಚೆಗೆ ನಡೆದ ಎರಡು ಭಯೋತ್ಪಾದಕ ದಾಳಿಯ ಪ್ರಕರಣಗಳನ್ನು ಉಲ್ಲೇಖಿಸಿದರು. 'ಈ ಪೈಕಿ ಒಂದು ಘಟನೆಯ ಮೂಲಕ ಪಾಕಿಸ್ತಾನದಲ್ಲಿದೆ. ನಾಗರಿಕ ಜಗತ್ತು ಭಯೋತ್ಪಾದನೆ ನಿಗ್ರಹಿಸಲು ದೃಢ ಸಂಕಲ್ಪ ತೊಡಬೇಕಾಗಿದೆ' ಎಂದು ಹೇಳಿದರು.</p>.<p>ಜಾಗತಿಕ ಮಹತ್ವ ಪಡೆದಿರುವ ಮುಖ್ಯ ವಿಚಾರಗಳನ್ನು ಪ್ರಸ್ತಾಪಿಸಿದ ಅವರು, 'ಈಚಿನ ದಿನಗಳಲ್ಲಿ ಉದ್ಭವಿಸಿರುವ ಬಿಕ್ಕಟ್ಟುಗಳು ಭಾರತದ ದೂರಗಾಮಿ ಯೋಜನೆಗಳ ಅನುಷ್ಠಾನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಇಂಡೊ-ಪೆಸಿಫಿಕ್ ವಲಯದಲ್ಲಿ ಮುಕ್ತ ಮತ್ತು ಎಲ್ಲರನ್ನೂ ಒಳಗೊಳ್ಳುವ ಪರಿಸ್ಥಿತಿ ರೂಪುಗೊಳ್ಳಬೇಕು ಎಂಬ ಬಗ್ಗೆ ಭಾರತದ ಬದ್ಧತೆಯೂ ಬದಲಾಗಿಲ್ಲ' ಎಂದು ಮಾಹಿತಿ ನೀಡಿದರು.</p>.<p>ಒಂದು ವಾರದ ಯುರೋಪ್ ಪ್ರವಾಸಕ್ಕಾಗಿ ಶ್ರಿಂಗ್ಲಾಫ್ರಾನ್ಸ್ಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಅವರುಜರ್ಮನಿ ಮತ್ತು ಬ್ರಿಟನ್ಗಳಿಗೂ ಭೇಟಿ ನೀಡಲಿದ್ದಾರೆ. ಭಯೋತ್ಪಾದಕ ದಾಳಿ ಎದುರಿಸಿದ ಸಂದರ್ಭದಲ್ಲಿಯೇ ಅವರು ಫ್ರಾನ್ಸ್ಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆ ಮಹತ್ವ ಪಡೆದಿದೆ.</p>.<p>ಫ್ರಾನ್ಸ್ನ ನೈಸ್ ನಗರದ ಚರ್ಚ್ ಮೇಲೆ ಗುರುವಾರ (ಅ.29) ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುವಲ್ ಮಾರ್ಕೊನ್ ಇದು 'ಇಸ್ಲಾಮಿಕ್ ಭಯೋತ್ಪಾದಕರ ದಾಳಿ' ಎಂದು ವ್ಯಾಖ್ಯಾನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚೀನಾ ಗಡಿಯಲ್ಲಿ ಭಾರತವು ಈವರೆಗಿನ ಅತಿದೊಡ್ಡ ಬಿಕ್ಕಟ್ಟನ್ನು ಕೊರೊನಾ ಸಂಕಷ್ಟದ ನಡುವೆಯೂ ದೃಢವಾಗಿ ಮತ್ತು ಪ್ರಬುದ್ಧವಾಗಿ ಎದುರಿಸಿತು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಹೇಳಿದರು.</p>.<p>ಪ್ಯಾರೀಸ್ನ ಚಿಂತಕರ ಚಾವಡಿಯ ವೇದಿಕೆಯಲ್ಲಿ ಮಾತನಾಡಿದ ಶ್ರಿಂಗ್ಲಾ, ಫ್ರಾನ್ಸ್ನಲ್ಲಿ ಈಚೆಗೆ ನಡೆದ ಎರಡು ಭಯೋತ್ಪಾದಕ ದಾಳಿಯ ಪ್ರಕರಣಗಳನ್ನು ಉಲ್ಲೇಖಿಸಿದರು. 'ಈ ಪೈಕಿ ಒಂದು ಘಟನೆಯ ಮೂಲಕ ಪಾಕಿಸ್ತಾನದಲ್ಲಿದೆ. ನಾಗರಿಕ ಜಗತ್ತು ಭಯೋತ್ಪಾದನೆ ನಿಗ್ರಹಿಸಲು ದೃಢ ಸಂಕಲ್ಪ ತೊಡಬೇಕಾಗಿದೆ' ಎಂದು ಹೇಳಿದರು.</p>.<p>ಜಾಗತಿಕ ಮಹತ್ವ ಪಡೆದಿರುವ ಮುಖ್ಯ ವಿಚಾರಗಳನ್ನು ಪ್ರಸ್ತಾಪಿಸಿದ ಅವರು, 'ಈಚಿನ ದಿನಗಳಲ್ಲಿ ಉದ್ಭವಿಸಿರುವ ಬಿಕ್ಕಟ್ಟುಗಳು ಭಾರತದ ದೂರಗಾಮಿ ಯೋಜನೆಗಳ ಅನುಷ್ಠಾನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಇಂಡೊ-ಪೆಸಿಫಿಕ್ ವಲಯದಲ್ಲಿ ಮುಕ್ತ ಮತ್ತು ಎಲ್ಲರನ್ನೂ ಒಳಗೊಳ್ಳುವ ಪರಿಸ್ಥಿತಿ ರೂಪುಗೊಳ್ಳಬೇಕು ಎಂಬ ಬಗ್ಗೆ ಭಾರತದ ಬದ್ಧತೆಯೂ ಬದಲಾಗಿಲ್ಲ' ಎಂದು ಮಾಹಿತಿ ನೀಡಿದರು.</p>.<p>ಒಂದು ವಾರದ ಯುರೋಪ್ ಪ್ರವಾಸಕ್ಕಾಗಿ ಶ್ರಿಂಗ್ಲಾಫ್ರಾನ್ಸ್ಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಅವರುಜರ್ಮನಿ ಮತ್ತು ಬ್ರಿಟನ್ಗಳಿಗೂ ಭೇಟಿ ನೀಡಲಿದ್ದಾರೆ. ಭಯೋತ್ಪಾದಕ ದಾಳಿ ಎದುರಿಸಿದ ಸಂದರ್ಭದಲ್ಲಿಯೇ ಅವರು ಫ್ರಾನ್ಸ್ಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆ ಮಹತ್ವ ಪಡೆದಿದೆ.</p>.<p>ಫ್ರಾನ್ಸ್ನ ನೈಸ್ ನಗರದ ಚರ್ಚ್ ಮೇಲೆ ಗುರುವಾರ (ಅ.29) ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುವಲ್ ಮಾರ್ಕೊನ್ ಇದು 'ಇಸ್ಲಾಮಿಕ್ ಭಯೋತ್ಪಾದಕರ ದಾಳಿ' ಎಂದು ವ್ಯಾಖ್ಯಾನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>