‘ವಿದ್ಯಾರ್ಥಿಗಳನ್ನು ಉಕ್ರೇನ್ ಪಡೆಗಳು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿವೆ. ಅವರನ್ನು ಮಾನವ ಗುರಾಣಿಯಾಗಿ ಬಳಸಲಾಗುತ್ತಿದೆ. ವಿದ್ಯಾರ್ಥಿಗಳು ರಷ್ಯಾದ ಕಡೆ ತೆರಳುವುದನ್ನು ತಡೆಯಲು ಎಲ್ಲವನ್ನೂ ಮಾಡಲಾಗುತ್ತಿದೆ. ಭಾರತೀಯರನ್ನು ಮಾನವೀಯ ನೆಲೆಯಲ್ಲಿ ಸ್ಥಳಾಂತರ ಮಾಡಲು ರಷ್ಯಾ ಪ್ರಯತ್ನಿಸುತ್ತಿದೆ’ ಎಂದು ರಷ್ಯಾ ಸರ್ಕಾರ ತಿಳಿಸಿತ್ತು. ಇದಕ್ಕೂ ಮೊದಲು ವ್ಲಾಡಿಮಿರ್ ಪುಟಿನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವೆ ವಿಡಿಯೊ ಕನ್ಫರೆನ್ಸ್ ನಡೆದಿತ್ತು.