<p><strong>ನವದೆಹಲಿ</strong>: ಭಾರತವು ಭವಿಷ್ಯದ ಕುರಿತಾದ ದೃಷ್ಟಿಕೋನದ ದಿವಾಳಿತನ ಎದುರಿಸುತ್ತಿದೆ ಎಂದು ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p>ನಾವು ಏಕಸಾಮ್ಯದ ವಿರುದ್ಧವಾಗಿದ್ದು, ನಿಷ್ಪಕ್ಷಪಾತದ ಪರವಾಗಿದ್ದೇವೆ ಎಂದಿದ್ದಾರೆ.</p>.<p>‘ನಮ್ಮ ದೇಶದ ಭವಿಷ್ಯವೇನು? ಎಂಬುದರ ಬಗ್ಗೆ ಭಾರತವು ದೃಷ್ಟಿಕೋನದ ದಿವಾಳಿತನ ಎದುರಿಸುತ್ತಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>'ನಾವು ಬೃಹತ್ ಏಕಸ್ವಾಮ್ಯದ ಕಲ್ಪನೆಗೆ ವಿರುದ್ಧವಾಗಿದ್ದೇವೆ. ನಾವು ರೈತರು ಅಥವಾ ಎಂಎಸ್ಎಂಇಗಳ ವಿರುದ್ಧದ ಅನ್ಯಾಯದ ವಿರುದ್ಧವಾಗಿದ್ದೇವೆ. ನ್ಯಾಯಸಮ್ಮತತೆ ಮೇಲುಗೈ ಸಾಧಿಸಲು ನಾವು ಕಾರ್ಯನಿರ್ವಹಿಸುತ್ತೇವೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಭಾರತೀಯ ಜನತಾ ಪಕ್ಷವು ದೇಶಕ್ಕೆ ಸೂಕ್ತ ದೃಷ್ಟಿಕೋನ ನೀಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು, ಜನರಲ್ಲಿ ದ್ವೇಷ ಮತ್ತು ವಿಭಜನೆಯನ್ನು ಉತ್ತೇಜಿಸುತ್ತಿದೆ ಎಂದು ಟೀಕಿಸಿದರು.</p>.<p>ಕೆಲ ಬೃಹತ್ ಉದ್ಯಮಿಗಳ ಅನುಕೂಲಕ್ಕಾಗಿ ಮಾತ್ರ ಬಿಜೆಪಿ ಸರ್ಕಾರ ಶ್ರಮಿಸುತ್ತಿದೆ ಎಂದೂ ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತವು ಭವಿಷ್ಯದ ಕುರಿತಾದ ದೃಷ್ಟಿಕೋನದ ದಿವಾಳಿತನ ಎದುರಿಸುತ್ತಿದೆ ಎಂದು ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p>ನಾವು ಏಕಸಾಮ್ಯದ ವಿರುದ್ಧವಾಗಿದ್ದು, ನಿಷ್ಪಕ್ಷಪಾತದ ಪರವಾಗಿದ್ದೇವೆ ಎಂದಿದ್ದಾರೆ.</p>.<p>‘ನಮ್ಮ ದೇಶದ ಭವಿಷ್ಯವೇನು? ಎಂಬುದರ ಬಗ್ಗೆ ಭಾರತವು ದೃಷ್ಟಿಕೋನದ ದಿವಾಳಿತನ ಎದುರಿಸುತ್ತಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>'ನಾವು ಬೃಹತ್ ಏಕಸ್ವಾಮ್ಯದ ಕಲ್ಪನೆಗೆ ವಿರುದ್ಧವಾಗಿದ್ದೇವೆ. ನಾವು ರೈತರು ಅಥವಾ ಎಂಎಸ್ಎಂಇಗಳ ವಿರುದ್ಧದ ಅನ್ಯಾಯದ ವಿರುದ್ಧವಾಗಿದ್ದೇವೆ. ನ್ಯಾಯಸಮ್ಮತತೆ ಮೇಲುಗೈ ಸಾಧಿಸಲು ನಾವು ಕಾರ್ಯನಿರ್ವಹಿಸುತ್ತೇವೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಭಾರತೀಯ ಜನತಾ ಪಕ್ಷವು ದೇಶಕ್ಕೆ ಸೂಕ್ತ ದೃಷ್ಟಿಕೋನ ನೀಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು, ಜನರಲ್ಲಿ ದ್ವೇಷ ಮತ್ತು ವಿಭಜನೆಯನ್ನು ಉತ್ತೇಜಿಸುತ್ತಿದೆ ಎಂದು ಟೀಕಿಸಿದರು.</p>.<p>ಕೆಲ ಬೃಹತ್ ಉದ್ಯಮಿಗಳ ಅನುಕೂಲಕ್ಕಾಗಿ ಮಾತ್ರ ಬಿಜೆಪಿ ಸರ್ಕಾರ ಶ್ರಮಿಸುತ್ತಿದೆ ಎಂದೂ ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>