<p class="rtejustify"><strong>ನವದೆಹಲಿ: </strong>ಮ್ಯಾನ್ಮಾರ್ನ ಸಾವಿರಾರು ಮಂದಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಆಶ್ರಯ ಪಡೆದಿದ್ದು, ಹೊಸ ಸಮಸ್ಯೆಗಳನ್ನು ಸೃಷ್ಟಿಸುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.</p>.<p class="rtejustify">ಈ ರಾಜ್ಯಗಳು, ಮ್ಯಾನ್ಮಾರ್ನಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸುವಂತೆ ನಡೆಸುವ ಹೋರಾಟದ ಚಟುವಟಿಕೆಗಳ ತಾಣವಾಗಬಹುದು. ಇದರಿಂದ, ಅಸ್ಥಿರತೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p class="rtejustify">ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್ನಲ್ಲಿ ಮ್ಯಾನ್ಮಾರ್ನ ಸುಮಾರು 16 ಸಾವಿರ ಮಂದಿ ಆಶ್ರಯ ಪಡೆದಿದ್ದಾರೆ.ಮಿಜೋರಾಂ ರಾಜ್ಯಕ್ಕೆ ಅತಿ ಹೆಚ್ಚು ಜನರು ಪ್ರವೇಶಿಸಿದ್ದಾರೆ ಎಂದು ವಿವಿಧ ಸಂಘಟನೆಗಳು ಮತ್ತು ಸರ್ಕಾರಿ ಅಧಿಕಾರಿಗಳು ಅಂದಾಜಿಸಿದ್ದಾರೆ.</p>.<p class="rtejustify">ಮಿಲಿಟರಿ ಆಡಳಿತದ ದೌರ್ಜನ್ಯದಿಂದ ತಪ್ಪಿಸಿಕೊಂಡು ಮ್ಯಾನ್ಮಾರ್ನಿಂದ ಇವರೆಲ್ಲರೂ ಬಂದಿದ್ದಾರೆ. ಹಲವರು ಬೇಲಿ ಇಲ್ಲದ ದಟ್ಟವಾದ ಅರಣ್ಯದ ಮೂಲಕ ಇವರು ಭಾರತ ಪ್ರವೇಶಿಸಿದ್ದಾರೆ</p>.<p class="rtejustify">‘ಪ್ರಸ್ತುತ ಪರಿಸ್ಥಿತಿ ಬಗ್ಗೆ ನಿರಂತರವಾಗಿ ನಿಗಾವಹಿಸಲಾಗಿದೆ. ಹಲವರು ಸ್ಥಳೀಯರ ಸಹಾಯದಿಂದಲೇ ಭಾರತ ಪ್ರವೇಶಿಸಿದ್ದಾರೆ. ಅವರಲ್ಲಿ ಕೆಲವರು ವಾಪಸ್ ತೆರಳಿದ್ದಾರೆ. ಇಲ್ಲಿ ಯಾವುದೇ ರೀತಿ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="rtejustify">‘ಮೇ ತಿಂಗಳಲ್ಲಿ ಮಿಜೋರಾಂನ ಚಂಫಿ ಜಿಲ್ಲೆಯಲ್ಲಿ ಕನಿಷ್ಠ 50 ಮಂದಿ ತರಬೇತಿ ಶಿಬಿರ ನಡೆಸಿದ್ದರು. ತರಬೇತಿಯಲ್ಲಿ ಯಾವುದೇ ಶಸ್ತ್ರಾಸ್ತ್ರಗಳನ್ನು ಬಳಸಿರಲಿಲ್ಲ. ಭಾರತದ ಅರೆಸೇನಾ ಪಡೆಗಳು ವಿಚಾರಣೆ ನಡೆಸಿದ ಬಳಿಕ ಶಿಬಿರವನ್ನು ಮುಕ್ತಾಯಗೊಳಿಸಲಾಯಿತು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="rtejustify">ಮ್ಯಾನ್ಮಾರ್ನಲ್ಲಿನ ಪ್ರಜಾಪ್ರಭುತ್ವದ ಪರ ಕೆಲವು ಹೋರಾಟಗಾರರು ಭಾರತ ಹಾಗೂ ಮ್ಯಾನ್ಮಾರ್ನ ರಖಿನೆ ಪ್ರದೇಶದಲ್ಲಿರುವ ಉಗ್ರಗಾಮಿ ಸಂಘಟನೆಯಾದ ಅರಕನ್ ಸೇನೆಯಿಂದಲೂ ಶಸ್ತ್ರಾಸ್ತ್ರ ಸಂಗ್ರಹಿಸಿದ್ದಾರೆ ಎಂದು ಪದಚ್ಯುತ ನಾಯಕಿ ಆಂಗ್ ಸಾನ್ ಸೂ ಕಿ ಆಡಳಿತದಲ್ಲಿದ್ದ ಪ್ರಮುಖ ನಾಯಕರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ನವದೆಹಲಿ: </strong>ಮ್ಯಾನ್ಮಾರ್ನ ಸಾವಿರಾರು ಮಂದಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಆಶ್ರಯ ಪಡೆದಿದ್ದು, ಹೊಸ ಸಮಸ್ಯೆಗಳನ್ನು ಸೃಷ್ಟಿಸುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.</p>.<p class="rtejustify">ಈ ರಾಜ್ಯಗಳು, ಮ್ಯಾನ್ಮಾರ್ನಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸುವಂತೆ ನಡೆಸುವ ಹೋರಾಟದ ಚಟುವಟಿಕೆಗಳ ತಾಣವಾಗಬಹುದು. ಇದರಿಂದ, ಅಸ್ಥಿರತೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p class="rtejustify">ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್ನಲ್ಲಿ ಮ್ಯಾನ್ಮಾರ್ನ ಸುಮಾರು 16 ಸಾವಿರ ಮಂದಿ ಆಶ್ರಯ ಪಡೆದಿದ್ದಾರೆ.ಮಿಜೋರಾಂ ರಾಜ್ಯಕ್ಕೆ ಅತಿ ಹೆಚ್ಚು ಜನರು ಪ್ರವೇಶಿಸಿದ್ದಾರೆ ಎಂದು ವಿವಿಧ ಸಂಘಟನೆಗಳು ಮತ್ತು ಸರ್ಕಾರಿ ಅಧಿಕಾರಿಗಳು ಅಂದಾಜಿಸಿದ್ದಾರೆ.</p>.<p class="rtejustify">ಮಿಲಿಟರಿ ಆಡಳಿತದ ದೌರ್ಜನ್ಯದಿಂದ ತಪ್ಪಿಸಿಕೊಂಡು ಮ್ಯಾನ್ಮಾರ್ನಿಂದ ಇವರೆಲ್ಲರೂ ಬಂದಿದ್ದಾರೆ. ಹಲವರು ಬೇಲಿ ಇಲ್ಲದ ದಟ್ಟವಾದ ಅರಣ್ಯದ ಮೂಲಕ ಇವರು ಭಾರತ ಪ್ರವೇಶಿಸಿದ್ದಾರೆ</p>.<p class="rtejustify">‘ಪ್ರಸ್ತುತ ಪರಿಸ್ಥಿತಿ ಬಗ್ಗೆ ನಿರಂತರವಾಗಿ ನಿಗಾವಹಿಸಲಾಗಿದೆ. ಹಲವರು ಸ್ಥಳೀಯರ ಸಹಾಯದಿಂದಲೇ ಭಾರತ ಪ್ರವೇಶಿಸಿದ್ದಾರೆ. ಅವರಲ್ಲಿ ಕೆಲವರು ವಾಪಸ್ ತೆರಳಿದ್ದಾರೆ. ಇಲ್ಲಿ ಯಾವುದೇ ರೀತಿ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="rtejustify">‘ಮೇ ತಿಂಗಳಲ್ಲಿ ಮಿಜೋರಾಂನ ಚಂಫಿ ಜಿಲ್ಲೆಯಲ್ಲಿ ಕನಿಷ್ಠ 50 ಮಂದಿ ತರಬೇತಿ ಶಿಬಿರ ನಡೆಸಿದ್ದರು. ತರಬೇತಿಯಲ್ಲಿ ಯಾವುದೇ ಶಸ್ತ್ರಾಸ್ತ್ರಗಳನ್ನು ಬಳಸಿರಲಿಲ್ಲ. ಭಾರತದ ಅರೆಸೇನಾ ಪಡೆಗಳು ವಿಚಾರಣೆ ನಡೆಸಿದ ಬಳಿಕ ಶಿಬಿರವನ್ನು ಮುಕ್ತಾಯಗೊಳಿಸಲಾಯಿತು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="rtejustify">ಮ್ಯಾನ್ಮಾರ್ನಲ್ಲಿನ ಪ್ರಜಾಪ್ರಭುತ್ವದ ಪರ ಕೆಲವು ಹೋರಾಟಗಾರರು ಭಾರತ ಹಾಗೂ ಮ್ಯಾನ್ಮಾರ್ನ ರಖಿನೆ ಪ್ರದೇಶದಲ್ಲಿರುವ ಉಗ್ರಗಾಮಿ ಸಂಘಟನೆಯಾದ ಅರಕನ್ ಸೇನೆಯಿಂದಲೂ ಶಸ್ತ್ರಾಸ್ತ್ರ ಸಂಗ್ರಹಿಸಿದ್ದಾರೆ ಎಂದು ಪದಚ್ಯುತ ನಾಯಕಿ ಆಂಗ್ ಸಾನ್ ಸೂ ಕಿ ಆಡಳಿತದಲ್ಲಿದ್ದ ಪ್ರಮುಖ ನಾಯಕರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>