<p><strong>ಕೊಪನ್ಹೆಗನ್:</strong> ‘ಭೂಮಿಯ ಶೋಷಣೆಯಲ್ಲಿ ಭಾರತ ಯಾವುದೇ ಪಾತ್ರವನ್ನು ಹೊಂದಿಲ್ಲ. ಬದಲಾಗಿ, ಜನರ ಬೆಂಬಲದೊಂದಿಗೆ ಭೂಮಿಯನ್ನು ಉಳಿಸುವ ಪ್ರಯತ್ನದಲ್ಲಿ ಭಾರತ ಮುಂಚೂಣಿಯಲ್ಲಿ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.</p>.<p>ಭಾರತೀಯರೊಂದಿಗೆ ಇಲ್ಲಿ ಸಂವಾದದಲ್ಲಿ ಮಾತನಾಡಿದ ಅವರು, ನವೀಕರಿಸಬಲ್ಲ ಇಂಧನ ಬಳಕೆಯನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳು ಹಾಗೂ ಗ್ಲಾಸ್ಗೋ ಹವಾಮಾನ ವೈಪರೀತ್ಯ ತಡೆ ಶೃಂಗ ಸಭೆಯಲ್ಲಿ ಭಾರತ ತೆಗೆದುಕೊಂಡ ಬದ್ಧತೆಗಳ ಬಗ್ಗೆಯೂ ಉಲ್ಲೇಖಿಸಿದರು.</p>.<p>‘ಭಾರತ ತನ್ನ ಹವಾಮಾನ ಕ್ರಮಗಳನ್ನು ಪೂರೈಸಲು ಸಮರ್ಥವಾಗಿದೆ. ಏಕೆಂದರೆ,ಭಾರತವು ಇತರರಂತೆ ಭೂಮಿಯನ್ನು ಉಳಿಸುವ ಜವಾಬ್ದಾರಿಯನ್ನು ಕೇವಲ ಬಹುಪಕ್ಷೀಯ ಸಂಸ್ಥೆಗಳ ಮೇಲೆ ಹೊರಿಸಿಲ್ಲ. ಜಗತ್ತಿನ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂಬುದಾಗಿ ಪರಿಗಣಿಸಿದೆ’ ಎಂದು ಅವರು ಹೇಳಿದರು.</p>.<p>ಈ ಸಂವಾದ ಕಾರ್ಯಕ್ರಮದಲ್ಲಿ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೂ ಭಾಗವಹಿಸಿದ್ದರು. ಈ ವೇಳೆ ಮೋದಿ ಡೆನ್ಮಾರ್ಕ್ ಪ್ರಧಾನಿಯನ್ನು ‘ಸ್ನೇಹಿತೆ’ ಎಂದು ಜನರಿಗೆ ಪರಿಚಯಿಸಿದರು.</p>.<p>ಕಾರ್ಯಕ್ರಮದಲ್ಲಿ ಡೆನ್ಮಾರ್ಕ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು, ಸಂಶೋಧಕರು, ವೃತ್ತಿಪರರು, ಉದ್ಯೋಗಿಗಳು ಸೇರಿದಂತೆ 1000ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪನ್ಹೆಗನ್:</strong> ‘ಭೂಮಿಯ ಶೋಷಣೆಯಲ್ಲಿ ಭಾರತ ಯಾವುದೇ ಪಾತ್ರವನ್ನು ಹೊಂದಿಲ್ಲ. ಬದಲಾಗಿ, ಜನರ ಬೆಂಬಲದೊಂದಿಗೆ ಭೂಮಿಯನ್ನು ಉಳಿಸುವ ಪ್ರಯತ್ನದಲ್ಲಿ ಭಾರತ ಮುಂಚೂಣಿಯಲ್ಲಿ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.</p>.<p>ಭಾರತೀಯರೊಂದಿಗೆ ಇಲ್ಲಿ ಸಂವಾದದಲ್ಲಿ ಮಾತನಾಡಿದ ಅವರು, ನವೀಕರಿಸಬಲ್ಲ ಇಂಧನ ಬಳಕೆಯನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳು ಹಾಗೂ ಗ್ಲಾಸ್ಗೋ ಹವಾಮಾನ ವೈಪರೀತ್ಯ ತಡೆ ಶೃಂಗ ಸಭೆಯಲ್ಲಿ ಭಾರತ ತೆಗೆದುಕೊಂಡ ಬದ್ಧತೆಗಳ ಬಗ್ಗೆಯೂ ಉಲ್ಲೇಖಿಸಿದರು.</p>.<p>‘ಭಾರತ ತನ್ನ ಹವಾಮಾನ ಕ್ರಮಗಳನ್ನು ಪೂರೈಸಲು ಸಮರ್ಥವಾಗಿದೆ. ಏಕೆಂದರೆ,ಭಾರತವು ಇತರರಂತೆ ಭೂಮಿಯನ್ನು ಉಳಿಸುವ ಜವಾಬ್ದಾರಿಯನ್ನು ಕೇವಲ ಬಹುಪಕ್ಷೀಯ ಸಂಸ್ಥೆಗಳ ಮೇಲೆ ಹೊರಿಸಿಲ್ಲ. ಜಗತ್ತಿನ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂಬುದಾಗಿ ಪರಿಗಣಿಸಿದೆ’ ಎಂದು ಅವರು ಹೇಳಿದರು.</p>.<p>ಈ ಸಂವಾದ ಕಾರ್ಯಕ್ರಮದಲ್ಲಿ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೂ ಭಾಗವಹಿಸಿದ್ದರು. ಈ ವೇಳೆ ಮೋದಿ ಡೆನ್ಮಾರ್ಕ್ ಪ್ರಧಾನಿಯನ್ನು ‘ಸ್ನೇಹಿತೆ’ ಎಂದು ಜನರಿಗೆ ಪರಿಚಯಿಸಿದರು.</p>.<p>ಕಾರ್ಯಕ್ರಮದಲ್ಲಿ ಡೆನ್ಮಾರ್ಕ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು, ಸಂಶೋಧಕರು, ವೃತ್ತಿಪರರು, ಉದ್ಯೋಗಿಗಳು ಸೇರಿದಂತೆ 1000ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>