‘ಸಂಭಾವ್ಯ ಸಮಸ್ಯೆಯನ್ನು ಎದುರಿಸುವ ಸಲುವಾಗಿ, ಉಷ್ಣ ವಿದ್ಯುತ್ ಸ್ಥಾವರಗಳಿಗೆ ಅಗತ್ಯಪ್ರಮಾಣದ ಕಲ್ಲಿದ್ದಲನ್ನು ಪೂರೈಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ. ನೈರುತ್ಯ ಮುಂಗಾರಿನ ಆರಂಭವು ಕಲ್ಲಿದ್ದಲಿನ ಗಣಿಗಾರಿಕೆ ಹಾಗೂ ಸಾಗಣೆ ಮೇಲೆ ಪರಿಣಾಮವನ್ನುಂಟು ಮಾಡಲಿದೆ. ದೇಶದ ಸ್ಥಾವರಗಳಲ್ಲಿನ ದಾಸ್ತಾನು ಖಾಲಿಯಾಗುತ್ತಿರುವಂತೆಯೇ, ಕಲ್ಲಿದ್ದಲನ್ನು ಮರುಭರ್ತಿ ಮಾಡದೇ ಇದ್ದರೆ ವಿದ್ಯುತ್ ಸಮಸ್ಯೆ ಕಾಡಲಿದೆ’ ಎಂದೂ ಪ್ರತಿಪಾದಿಸಿದೆ.