ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಬೇಡ: ಚೀನಾ ವಿರುದ್ಧ ಹರಿಹಾಯ್ದ ಭಾರತ

Last Updated 6 ಆಗಸ್ಟ್ 2020, 12:32 IST
ಅಕ್ಷರ ಗಾತ್ರ

ನವದೆಹಲಿ: ‘ಆಂತರಿಕ ವ್ಯವಹಾರಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ’ ಎಂದು ಭಾರತವುಚೀನಾಕ್ಕೆ ಗುರುವಾರ ತಿರುಗೇಟು ನೀಡಿದೆ.

ಬುಧವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸಭೆಯಲ್ಲಿಕಾಶ್ಮೀರದ ವಿಷಯವನ್ನು ಚರ್ಚಿಸುವಂತೆ ಪಾಕಿಸ್ತಾನ ಒತ್ತಾಯಿಸಿತ್ತು. ಇದಕ್ಕೆ ಚೀನಾ ಬೆಂಬಲ ಸೂಚಿಸಿತ್ತು. ಆದರೆ ಉಭಯ ರಾಷ್ಟ್ರಗಳ ಈ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿರಲಿಲ್ಲ.

‘ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಚರ್ಚಿಸಬೇಕೆಂದು ಚೀನಾವು ವಿಶ್ವಸಂಸ್ಥೆ ಭದ್ರತಾ ಕೌನ್ಸಿಲ್‌ಗೆ ಮನವಿ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಚೀನಾ ಈಗಾಗಲೇ ಅನೇಕ ಬಾರಿ ಇಂತಹ ಪ್ರಯತ್ನಗಳನ್ನು ಮಾಡಿದೆ. ಆ ರಾಷ್ಟ್ರವು ನಮ್ಮ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳಿತು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT