<p><strong>ನವದೆಹಲಿ:</strong> ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಸಭೆಯಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನ ಹಾಗೂ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ ಭಾರತ ಬುಧವಾರ ವಾಗ್ದಾಳಿ ನಡೆಸಿತು.</p>.<p>‘ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವುದಕ್ಕೆ ಅವಕಾಶ ನೀಡಿರುವುದು ಮಂಡಳಿಯ ಅಸಹಾಯಕತೆಯನ್ನು ತೋರುತ್ತದೆ. ಅಲ್ಲದೇ, ತನ್ನನ್ನು ಪಾಕಿಸ್ತಾನ ಒತ್ತೆಯಾಳಂತೆ ನಡೆಸಿಕೊಳ್ಳಲು, ಮಂಡಳಿ ತಾನಾಗಿಯೇ ಅನುಮತಿ ಕೊಟ್ಟಂತಾಗಿದೆ’ ಎಂದೂ ಭಾರತ ಟೀಕಿಸಿದೆ.</p>.<p>ಮಂಡಳಿಯ 48ನೇ ಸಭೆಯಲ್ಲಿ ಮಾತನಾಡಿದ, ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಮಿಷನ್ನ ಮೊದಲನೇ ಕಾರ್ಯದರ್ಶಿ ಪವರ್ ಬಢೆ ಅವರು, ‘ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಹಾಗೂ ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನದಿಂದ ಭಾರತ ಪಾಠ ಕಲಿಯುವ ಅಗತ್ಯ ಇಲ್ಲ’ ಎಂದು ತಿರುಗೇಟು ನೀಡಿದರು.</p>.<p>‘ಭಾರತದ ವಿರುದ್ಧ ಅಪಪ್ರಚಾರ ನಡೆಸುವ ಸಲುವಾಗಿ ಮಂಡಳಿ ಒದಗಿಸುವ ವೇದಿಕೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಪಾಕಿಸ್ತಾನದ ವ್ಯಸನವಾಗಿದೆ. ತನ್ನ ನೆಲದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವದ ಗಮನವನ್ನು ಬೇರೆಡೆ ಸೆಳೆಯಲು ಪಾಕಿಸ್ತಾನ ಇಂಥ ತಂತ್ರಗಳ ಮೊರೆ ಹೋಗುತ್ತದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಸಭೆಯಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನ ಹಾಗೂ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ ಭಾರತ ಬುಧವಾರ ವಾಗ್ದಾಳಿ ನಡೆಸಿತು.</p>.<p>‘ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವುದಕ್ಕೆ ಅವಕಾಶ ನೀಡಿರುವುದು ಮಂಡಳಿಯ ಅಸಹಾಯಕತೆಯನ್ನು ತೋರುತ್ತದೆ. ಅಲ್ಲದೇ, ತನ್ನನ್ನು ಪಾಕಿಸ್ತಾನ ಒತ್ತೆಯಾಳಂತೆ ನಡೆಸಿಕೊಳ್ಳಲು, ಮಂಡಳಿ ತಾನಾಗಿಯೇ ಅನುಮತಿ ಕೊಟ್ಟಂತಾಗಿದೆ’ ಎಂದೂ ಭಾರತ ಟೀಕಿಸಿದೆ.</p>.<p>ಮಂಡಳಿಯ 48ನೇ ಸಭೆಯಲ್ಲಿ ಮಾತನಾಡಿದ, ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಮಿಷನ್ನ ಮೊದಲನೇ ಕಾರ್ಯದರ್ಶಿ ಪವರ್ ಬಢೆ ಅವರು, ‘ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಹಾಗೂ ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನದಿಂದ ಭಾರತ ಪಾಠ ಕಲಿಯುವ ಅಗತ್ಯ ಇಲ್ಲ’ ಎಂದು ತಿರುಗೇಟು ನೀಡಿದರು.</p>.<p>‘ಭಾರತದ ವಿರುದ್ಧ ಅಪಪ್ರಚಾರ ನಡೆಸುವ ಸಲುವಾಗಿ ಮಂಡಳಿ ಒದಗಿಸುವ ವೇದಿಕೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಪಾಕಿಸ್ತಾನದ ವ್ಯಸನವಾಗಿದೆ. ತನ್ನ ನೆಲದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವದ ಗಮನವನ್ನು ಬೇರೆಡೆ ಸೆಳೆಯಲು ಪಾಕಿಸ್ತಾನ ಇಂಥ ತಂತ್ರಗಳ ಮೊರೆ ಹೋಗುತ್ತದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>