‘ಸಭೆಯಲ್ಲಿ ಯಾವೆಲ್ಲಾ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ ಎಂಬುದನ್ನು ಈಗಲೇ ಹೇಳುವುದು ಕಷ್ಟ. ಪಾಲ್ಗೊಳ್ಳಲಿರುವ ಬಹುತೇಕ ಸಚಿವರು ರಷ್ಯಾ ಮತ್ತು ಉಕ್ರೇನ್ ನಡುವಣ ಸಂಘರ್ಷದ ಕುರಿತ ಚರ್ಚೆಗೆ ಬಿಗಿಪಟ್ಟು ಹಿಡಿಯುವುದು ಸಹಜ. ಈ ಬಿಕ್ಕಟ್ಟಿನಿಂದಾಗಿ ಆಹಾರ, ಇಂಧನ, ರಸಗೊಬ್ಬರದ ಭದ್ರತೆಯ ಮೇಲೆ ಉಂಟಾಗಿರುವ ಪ್ರತಿಕೂಲ ಪರಿಣಾಮದ ಕುರಿತೂ ಚರ್ಚೆ ನಡೆಯುವ ನಿರೀಕ್ಷೆ ಇದೆ’ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ತಿಳಿಸಿದ್ದಾರೆ.