ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಯೆಚೂರಿ

Last Updated 26 ಜೂನ್ 2022, 13:42 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ ಇದ್ದು, 1975ರ ತುರ್ತು ಪರಿಸ್ಥಿತಿಯಂತೆ ಇದನ್ನು ಸಹ ಸೋಲಿಸಲಾಗುವುದು ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಭಾನುವಾರ ಹೇಳಿದ್ದಾರೆ.

1975ರಲ್ಲಿ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಹೇಗೆ ಸೋಲಿಸಲಾಯಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ಉಲ್ಲೇಖಿಸಿದ್ದರು, ಇದಕ್ಕೆ ಪ್ರತಿಕ್ರಿಯಿಸಿ ಯೆಚೂರಿ ಅವರು ಈ ಹೇಳಿಕೆ ನೀಡಿದ್ದಾರೆ.

‘ಪ್ರಜಾಪ್ರಭುತ್ವಕ್ಕೆ ಅಚ್ಚೇ ದಿನ್‌ ಮರಳಿ ಬರಲಿದೆ. ಇದಕ್ಕಾಗಿ ಹೋರಾಟವು ಮುಂದುವರಿದಿದ್ದು, ಅದು ತೀವ್ರಗೊಳ್ಳಲಿದೆ’ ಎಂದೂ ಯೆಚೂರಿ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT