<p class="title"><strong>ನವದೆಹಲಿ: </strong>ಪೂರ್ವ ಲಡಾಖ್ ಬಳಿ ಇರುವ ಅನಿಶ್ಚಿತತೆ ಬಗೆಹರಿಸುವುದು ಸೇರಿದಂತೆ ಗಡಿ ವಿಚಾರದಲ್ಲಿ ಚೀನಾದ ಜೊತೆಗೆ ರಚನಾತ್ಮಕ ಚರ್ಚೆಯನ್ನು ಭಾರತ ನಿರೀಕ್ಷಿಸುತ್ತಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.</p>.<p class="title">ಉಭಯ ದೇಶಗಳ ನಡುವೆ ಸೇನಾ ಹಂತದಲ್ಲಿ ಚುಶುಲ್–ಮೊಲ್ಡೊ ಬಳಿ ಜನವರಿ 12ರಂದು 14ನೇ ಸುತ್ತಿನ ಮಾತುಕತೆ ನಡೆಯಲಿರುವ ಹಿನ್ನೆಲೆಯಲ್ಲಿ ಭಾರತ ಈ ಪ್ರತಿಕ್ರಿಯೆ ನೀಡಿದೆ.</p>.<p class="title">ಉಭಯ ದೇಶಗಳ ನಡುವೆ ಹಿರಿಯ, ಉನ್ನತ ಮಟ್ಟದ ಸೇನಾ ಕಮಾಂಡರ್ ಹಂತದ ಮಾತುತೆಯು 12ರಂದು ಬೆಳಿಗ್ಗೆ 9.30 ಗಂಟೆಗೆ ಆರಂಭವಾಗಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.</p>.<p>ವಿವಾದಿತ ಪ್ರದೇಶಗಳಿಗೆ ಅನ್ವಯಿಸಿ ಗೊಂದಲ ಬಗೆಹರಿಸಲು ಭಾರತ ರಚನಾತ್ಮಕ ಚರ್ಚೆ ನಿರೀಕ್ಷಿಸುತ್ತಿದೆ. ಬಿಗುವಿನ ಸ್ಥಿತಿ ಇರುವ ಪ್ರದೇಶಗಳಿಂದ ಸೇನೆ ಹಿಂಪಡೆಯುವ ವಿಷಯಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿವೆ.</p>.<p>13ನೇ ಸುತ್ತಿನ ಚರ್ಚೆ ಅ.10, 2021ರಂದು ನಡೆದಿತ್ತು. ಉಭಯ ದೇಶಗಳು ತಮ್ಮ ನಿಲುವಿಗೆ ಬದ್ಧರಾಗಿದ್ದು, ಯಥಾಸ್ಥಿತಿ ಮುಂದುವರಿದಿತ್ತು. ನವೆಂಬರ್ 18ರಂದು ವರ್ಚುವಲ್ ಸ್ವರೂಪದಲ್ಲಿ ನಡೆದಿದ್ದ ರಾಜತಾಂತ್ರಿಕ ಹಂತದ ಚರ್ಚೆಯಲ್ಲಿ ಸೇನಾ ಹಂತದಲ್ಲಿ 14ನೇ ಸುತ್ತಿನ ಚರ್ಚೆ ನಡೆಸಲು ನಿರ್ಧರಿಸಲಾಗಿತ್ತು.</p>.<p>ಪಾಂಗಾಂಗ್ ಸರೋವರದ ಬಳಿಕ ಉಭಯ ಸೇನೆಯ ತುಕಡಿಗಳ ನಡುವೆ ಘರ್ಷಣೆ ನಡೆದ ಬಳಿಕ ಮೇ 5, 2020ರಿಂದ ಅನಿಶ್ಚಿತ ಸ್ಥಿತಿ ನಿರ್ಮಾಣವಾಗಿದೆ. ಉಭಯ ದೇಶಗಳು ಗಡಿ ರೇಖೆಗೆ ಹೊಂದಿಕೊಂಡಂತೆ 50,000 ರಿಂದ 60000 ಸೈನಿಕರನ್ನು ಜಮಾವಣೆ ಮಾಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಪೂರ್ವ ಲಡಾಖ್ ಬಳಿ ಇರುವ ಅನಿಶ್ಚಿತತೆ ಬಗೆಹರಿಸುವುದು ಸೇರಿದಂತೆ ಗಡಿ ವಿಚಾರದಲ್ಲಿ ಚೀನಾದ ಜೊತೆಗೆ ರಚನಾತ್ಮಕ ಚರ್ಚೆಯನ್ನು ಭಾರತ ನಿರೀಕ್ಷಿಸುತ್ತಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.</p>.<p class="title">ಉಭಯ ದೇಶಗಳ ನಡುವೆ ಸೇನಾ ಹಂತದಲ್ಲಿ ಚುಶುಲ್–ಮೊಲ್ಡೊ ಬಳಿ ಜನವರಿ 12ರಂದು 14ನೇ ಸುತ್ತಿನ ಮಾತುಕತೆ ನಡೆಯಲಿರುವ ಹಿನ್ನೆಲೆಯಲ್ಲಿ ಭಾರತ ಈ ಪ್ರತಿಕ್ರಿಯೆ ನೀಡಿದೆ.</p>.<p class="title">ಉಭಯ ದೇಶಗಳ ನಡುವೆ ಹಿರಿಯ, ಉನ್ನತ ಮಟ್ಟದ ಸೇನಾ ಕಮಾಂಡರ್ ಹಂತದ ಮಾತುತೆಯು 12ರಂದು ಬೆಳಿಗ್ಗೆ 9.30 ಗಂಟೆಗೆ ಆರಂಭವಾಗಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.</p>.<p>ವಿವಾದಿತ ಪ್ರದೇಶಗಳಿಗೆ ಅನ್ವಯಿಸಿ ಗೊಂದಲ ಬಗೆಹರಿಸಲು ಭಾರತ ರಚನಾತ್ಮಕ ಚರ್ಚೆ ನಿರೀಕ್ಷಿಸುತ್ತಿದೆ. ಬಿಗುವಿನ ಸ್ಥಿತಿ ಇರುವ ಪ್ರದೇಶಗಳಿಂದ ಸೇನೆ ಹಿಂಪಡೆಯುವ ವಿಷಯಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿವೆ.</p>.<p>13ನೇ ಸುತ್ತಿನ ಚರ್ಚೆ ಅ.10, 2021ರಂದು ನಡೆದಿತ್ತು. ಉಭಯ ದೇಶಗಳು ತಮ್ಮ ನಿಲುವಿಗೆ ಬದ್ಧರಾಗಿದ್ದು, ಯಥಾಸ್ಥಿತಿ ಮುಂದುವರಿದಿತ್ತು. ನವೆಂಬರ್ 18ರಂದು ವರ್ಚುವಲ್ ಸ್ವರೂಪದಲ್ಲಿ ನಡೆದಿದ್ದ ರಾಜತಾಂತ್ರಿಕ ಹಂತದ ಚರ್ಚೆಯಲ್ಲಿ ಸೇನಾ ಹಂತದಲ್ಲಿ 14ನೇ ಸುತ್ತಿನ ಚರ್ಚೆ ನಡೆಸಲು ನಿರ್ಧರಿಸಲಾಗಿತ್ತು.</p>.<p>ಪಾಂಗಾಂಗ್ ಸರೋವರದ ಬಳಿಕ ಉಭಯ ಸೇನೆಯ ತುಕಡಿಗಳ ನಡುವೆ ಘರ್ಷಣೆ ನಡೆದ ಬಳಿಕ ಮೇ 5, 2020ರಿಂದ ಅನಿಶ್ಚಿತ ಸ್ಥಿತಿ ನಿರ್ಮಾಣವಾಗಿದೆ. ಉಭಯ ದೇಶಗಳು ಗಡಿ ರೇಖೆಗೆ ಹೊಂದಿಕೊಂಡಂತೆ 50,000 ರಿಂದ 60000 ಸೈನಿಕರನ್ನು ಜಮಾವಣೆ ಮಾಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>