ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಟೇಲ್ ಒತ್ತಿಹೇಳಿದರಾದರೂ, ಕೋವಿಡ್ಗೆ ಲಿಸಿಕೆಯೇ ಅಂತಿಮ ಪರಿಹಾರವಲ್ಲ ಎಂದೂ ಸ್ಪಷ್ಟಪಡಿಸಿದರು. ‘ನನ್ನ ಅಭಿಪ್ರಾಯದಲ್ಲಿ ಲಸಿಕೆ ಮಾತ್ರ ಸಮಸ್ಯೆಗೆ ಪರಿಹಾರವಲ್ಲ. ನಮಗೆ ಲಸಿಕೆ ಬೇಕು. ಆದರೆ, ಕೋವಿಡ್ ಚಿಕಿತ್ಸೆಗೆ ನಮಗೆ ಖಚಿತ ಶಿಷ್ಟಾಚಾರದ ಅಗತ್ಯವಿದೆ. ಈ ಲಸಿಕೆಯ ಪ್ರಯೋಗಗಳನ್ನು ಪ್ರಸ್ತುತ ಜಾಗತಿಕವಾಗಿ ಮಾಡಲಾಗುತ್ತಿದೆ. ಹೀಗಾಗಿ ಇದರಿಂದ ಶೇಕಡಾ 100 ರಷ್ಟು ಜನರಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗಲು ಸಾಧ್ಯವಿಲ್ಲ,’ ಎಂದು ಅವರು ತಿಳಿಸಿದರು.