ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಬಲ ಪ್ರಧಾನಿ ಪ್ರಬಲರಿಗೆ, ಸಿರಿವಂತರಿಗೆ ಮಾತ್ರ ನೆರವಾಗುತ್ತಾರೆ ಎಂದು ಹೇಳಿದರು.ಜವಾಹರ್ ಲಾಲ್ ನೆಹರೂ ಬಳಿಕ ಅತ್ಯಂತ ಪ್ರಬಲ ಪ್ರಧಾನಿ ಎನಿಸಿಕೊಂಡವರು ನಿರುದ್ಯೋಗ, ಹಣದುಬ್ಬರ, ಚೀನಾ ಅತಿಕ್ರಮಣ, ಕೈಗಾರಿಕೋದ್ಯಮಿಗಳ ಬ್ಯಾಂಕ್ ಸಾಲ ಮನ್ನಾ ಬಗ್ಗೆ ಪ್ರಶ್ನಿಸಿದರೆ ವ್ಯವಸ್ಥೆಯನ್ನು ದೂರುತ್ತಾರೆ ಎಂದು ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.