<p><strong>ಗಾಂಧಿನಗರ (ಗುಜರಾತ್): </strong>ಕೊರೊನಾ ವೈರಸ್ ಹೊಸ ರೀತಿಯ ಸವಾಲಾಗಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಕೊರೊನಾ ಸೋಂಕಿನ ವಿರುದ್ಧ ಯೋಜಿತ ಹೋರಾಟವನ್ನು ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು.</p>.<p>ಮಾನವ ಕುಲ ಎಂದೂ ಕಾಣದ ಹೊಸ ಸವಾಲು ಈ ಸೋಂಕು. ಆದರೂ ಭಾರತ ಇದನ್ನು ಚೆನ್ನಾಗಿ ನಿಭಾಯಿಸುತ್ತಿದೆ. ಭಾರತದ ಪ್ರಯತ್ನಕ್ಕೆ ಇಡೀ ವಿಶ್ವವೇ ಪ್ರಶಂಸೆ ವ್ಯಕ್ತಪಡಿಸಿದೆ. ಕೊರೊನಾ ಸೋಂಕಿಗೆ ಲಸಿಕೆ ಕಂಡು ಹಿಡಿಯುವ ತನಕ ಜನರು ಮುನ್ನಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಗಾಂಧಿನಗರದ ಲೋಕಸಭಾ ಸದಸ್ಯರಾದ ಶಾ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ₹134 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಡಿಜಿಟಲ್ ವೇದಿಕೆಮೂಲಕ ಗುರುವಾರ ಚಾಲನೆ ನೀಡಿದರು.</p>.<p>ಈ ವೇಳೆ ಮಾತನಾಡಿದ ಅವರುಕೊರೊನಾ ‘ಸೋಂಕು ಗಾಂಧಿನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನಿಧಾನಗೊಳಿಸಿದ್ದರೂ, ಭಾರತದ ಅಭಿವೃದ್ಧಿಯನ್ನು ಹೆಚ್ಚು ಕಾಲ ತೆಡೆಹಿಡಿಯಲು ಸಾಧ್ಯವಿಲ್ಲ’ ಎಂದರು.</p>.<p>ಗಾಂಧಿನಗರ ಕ್ಷೇತ್ರದಲ್ಲಿಉದ್ಯಾನಗಳ ನವೀಕರಣ, ಗಾಂಧಿನಗರ ನಗರದ ಆಂತರಿಕ ರಸ್ತೆ ಮತ್ತುಪೆಥಾಪುರ-ನಾರ್ದಿಪುರ ರಸ್ತೆ ವಿಸ್ತರಣೆ ಕಾಮಗಾರಿ,ಎರಡು ಶಾಲೆಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣ ಯೋಜನೆಗಳಿಗಾಗಿ ₹134 ಹಣವನ್ನು ಬಳಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧಿನಗರ (ಗುಜರಾತ್): </strong>ಕೊರೊನಾ ವೈರಸ್ ಹೊಸ ರೀತಿಯ ಸವಾಲಾಗಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಕೊರೊನಾ ಸೋಂಕಿನ ವಿರುದ್ಧ ಯೋಜಿತ ಹೋರಾಟವನ್ನು ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು.</p>.<p>ಮಾನವ ಕುಲ ಎಂದೂ ಕಾಣದ ಹೊಸ ಸವಾಲು ಈ ಸೋಂಕು. ಆದರೂ ಭಾರತ ಇದನ್ನು ಚೆನ್ನಾಗಿ ನಿಭಾಯಿಸುತ್ತಿದೆ. ಭಾರತದ ಪ್ರಯತ್ನಕ್ಕೆ ಇಡೀ ವಿಶ್ವವೇ ಪ್ರಶಂಸೆ ವ್ಯಕ್ತಪಡಿಸಿದೆ. ಕೊರೊನಾ ಸೋಂಕಿಗೆ ಲಸಿಕೆ ಕಂಡು ಹಿಡಿಯುವ ತನಕ ಜನರು ಮುನ್ನಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಗಾಂಧಿನಗರದ ಲೋಕಸಭಾ ಸದಸ್ಯರಾದ ಶಾ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ₹134 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಡಿಜಿಟಲ್ ವೇದಿಕೆಮೂಲಕ ಗುರುವಾರ ಚಾಲನೆ ನೀಡಿದರು.</p>.<p>ಈ ವೇಳೆ ಮಾತನಾಡಿದ ಅವರುಕೊರೊನಾ ‘ಸೋಂಕು ಗಾಂಧಿನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನಿಧಾನಗೊಳಿಸಿದ್ದರೂ, ಭಾರತದ ಅಭಿವೃದ್ಧಿಯನ್ನು ಹೆಚ್ಚು ಕಾಲ ತೆಡೆಹಿಡಿಯಲು ಸಾಧ್ಯವಿಲ್ಲ’ ಎಂದರು.</p>.<p>ಗಾಂಧಿನಗರ ಕ್ಷೇತ್ರದಲ್ಲಿಉದ್ಯಾನಗಳ ನವೀಕರಣ, ಗಾಂಧಿನಗರ ನಗರದ ಆಂತರಿಕ ರಸ್ತೆ ಮತ್ತುಪೆಥಾಪುರ-ನಾರ್ದಿಪುರ ರಸ್ತೆ ವಿಸ್ತರಣೆ ಕಾಮಗಾರಿ,ಎರಡು ಶಾಲೆಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣ ಯೋಜನೆಗಳಿಗಾಗಿ ₹134 ಹಣವನ್ನು ಬಳಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>