<p><strong>ನವದೆಹಲಿ</strong>: ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿಯು (ಒಎಚ್ಸಿಎಚ್ಆರ್) ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನವನ್ನು ಖಂಡಿಸಿದೆ. ತೀಸ್ತಾ ಪರ ಟ್ವೀಟ್ ಮಾಡಿರುವ ಒಎಚ್ಸಿಎಚ್ಆರ್ ವಿರುದ್ಧ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹರಿಹಾಯ್ದಿದ್ದಾರೆ.</p>.<p>‘ತೀಸ್ತಾ ಹಾಗೂ ಇಬ್ಬರುಮಾಜಿ ಐಪಿಎಸ್ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದು ಕಳವಳಕಾರಿ. ಅವರಿಗೆ ಕಿರುಕುಳ ನೀಡದೆ ಬಂಧಿತರನ್ನೆಲ್ಲಾ ಕೂಡಲೇ ಬಿಡುಗಡೆ ಮಾಡಬೇಕು’ ಎಂದುಒಎಚ್ಸಿಎಚ್ಆರ್ ಟ್ವೀಟ್ ಮೂಲಕ ಆಗ್ರಹಿಸಿದೆ.</p>.<p>‘ತೀಸ್ತಾ ಪ್ರಕರಣದ ಕುರಿತು ಒಎಚ್ಸಿಎಚ್ಆರ್ ಮಾಡಿರುವ ಟ್ವೀಟ್ ನಮ್ಮ ಗಮನಕ್ಕೆ ಬಂದಿದೆ. ಭಾರತದ ನ್ಯಾಯಾಂಗ ವ್ಯವಸ್ಥೆಯು ಸ್ವತಂತ್ರವಾಗಿದೆ. ಇದರಲ್ಲಿ ಮೂಗು ತೂರಿಸುವ ಕೆಲಸವನ್ನುಒಎಚ್ಸಿಎಚ್ಆರ್ ಮಾಡಬಾರದು’ ಎಂದು ಬಾಗ್ಚಿ ಹೇಳಿದ್ದಾರೆ.</p>.<p>‘ಕಾನೂನು ಉಲ್ಲಂಘಿಸುವವರ ವಿರುದ್ಧ ನ್ಯಾಯಾಂಗದ ಚೌಕಟ್ಟಿನಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡುವುದು ಸರಿಯಲ್ಲ’ ಎಂದು ಕಿಡಿಕಾರಿದ್ದಾರೆ.</p>.<p>2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ‘ಮುಗ್ಧ’ ಜನರನ್ನು ಸಿಲುಕಿಸುವುದಕ್ಕಾಗಿ ದಾಖಲೆಗಳನ್ನು ತಿರುಚಿದ ಮತ್ತು ಅಪರಾಧ ಒಳಸಂಚು ನಡೆಸಿದ ಆರೋಪದಲ್ಲಿತೀಸ್ತಾ, ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ.ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿಯು (ಒಎಚ್ಸಿಎಚ್ಆರ್) ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನವನ್ನು ಖಂಡಿಸಿದೆ. ತೀಸ್ತಾ ಪರ ಟ್ವೀಟ್ ಮಾಡಿರುವ ಒಎಚ್ಸಿಎಚ್ಆರ್ ವಿರುದ್ಧ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹರಿಹಾಯ್ದಿದ್ದಾರೆ.</p>.<p>‘ತೀಸ್ತಾ ಹಾಗೂ ಇಬ್ಬರುಮಾಜಿ ಐಪಿಎಸ್ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದು ಕಳವಳಕಾರಿ. ಅವರಿಗೆ ಕಿರುಕುಳ ನೀಡದೆ ಬಂಧಿತರನ್ನೆಲ್ಲಾ ಕೂಡಲೇ ಬಿಡುಗಡೆ ಮಾಡಬೇಕು’ ಎಂದುಒಎಚ್ಸಿಎಚ್ಆರ್ ಟ್ವೀಟ್ ಮೂಲಕ ಆಗ್ರಹಿಸಿದೆ.</p>.<p>‘ತೀಸ್ತಾ ಪ್ರಕರಣದ ಕುರಿತು ಒಎಚ್ಸಿಎಚ್ಆರ್ ಮಾಡಿರುವ ಟ್ವೀಟ್ ನಮ್ಮ ಗಮನಕ್ಕೆ ಬಂದಿದೆ. ಭಾರತದ ನ್ಯಾಯಾಂಗ ವ್ಯವಸ್ಥೆಯು ಸ್ವತಂತ್ರವಾಗಿದೆ. ಇದರಲ್ಲಿ ಮೂಗು ತೂರಿಸುವ ಕೆಲಸವನ್ನುಒಎಚ್ಸಿಎಚ್ಆರ್ ಮಾಡಬಾರದು’ ಎಂದು ಬಾಗ್ಚಿ ಹೇಳಿದ್ದಾರೆ.</p>.<p>‘ಕಾನೂನು ಉಲ್ಲಂಘಿಸುವವರ ವಿರುದ್ಧ ನ್ಯಾಯಾಂಗದ ಚೌಕಟ್ಟಿನಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡುವುದು ಸರಿಯಲ್ಲ’ ಎಂದು ಕಿಡಿಕಾರಿದ್ದಾರೆ.</p>.<p>2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ‘ಮುಗ್ಧ’ ಜನರನ್ನು ಸಿಲುಕಿಸುವುದಕ್ಕಾಗಿ ದಾಖಲೆಗಳನ್ನು ತಿರುಚಿದ ಮತ್ತು ಅಪರಾಧ ಒಳಸಂಚು ನಡೆಸಿದ ಆರೋಪದಲ್ಲಿತೀಸ್ತಾ, ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ.ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>