ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಎಲ್ಎಸಿ ಉಲ್ಲಂಘಿಸುವ ಚೀನಾ ಸೈನಿಕರ ಪ್ರಯತ್ನವನ್ನು ಡಿಸೆಂಬರ್ 9 ರಂದು ಭಾರತೀಯ ಯೋಧರು ವಿಫಲಗೊಳಿಸಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಸಂಸತ್ತಿಗೆ ತಿಳಿಸಿದ್ದಾರೆ. ಘಟನೆಯಲ್ಲಿ ಭಾರತದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಯಾರಿಗೂ ದೊಡ್ಡಮಟ್ಟದ ಗಾಯಗಳಾಗಿಲ್ಲ ಎಂದು ರಾಜನಾಥ್ ಸಿಂಗ್ ಸದನಕ್ಕೆ ಸ್ಪಷ್ಟಪಡಿಸಿದ್ದರು.