ಕ್ಷಿಪಣಿಯು ನಿಗದಿತ ಗುರಿಯನ್ನು ನಿಖರವಾಗಿ ತಲುಪಿದೆ. ವಾಯುಪಡೆಯ ಅಧಿಕಾರಿಗಳ ಸಮ್ಮುಖದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ), ಭಾರತ್ ಡೈನಾಮಿಕ್ಸ್ ಲಿ. (ಬಿಡಿಎಲ್) ಹಾಗೂ ಭಾರತ್ ಎಲೆಕ್ಟ್ರಾನಿಕ್ಸ್ ಲಿ. (ಬಿಇಎಲ್) ತಂಡವು ಈ ಪರೀಕ್ಷಾರ್ಥ ಉಡಾವಣೆಯನ್ನು ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ತಿಳಿಸಲಾಗಿದೆ.