ಬಾಲಾಸೋರ್ (ಒಡಿಶಾ): ಸ್ವದೇಶಿ ನಿರ್ಮಿತ ಸೀಮಿತ ದೂರ ತಲುಪಬಲ್ಲ ನೆಲದಿಂದ ನೆಲಕ್ಕೆ ಚಿಮ್ಮುವ 'ಪ್ರಳಯ್' ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಬುಧವಾರ ಯಶಸ್ವಿಯಾಗಿ ನಡೆಸಿತು.
ಒಡಿಶಾದ ಕರಾವಳಿ ದ್ವೀಪದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ ಬೆಳಿಗ್ಗೆ 10.30ರ ವೇಳೆಗೆ ಪರೀಕ್ಷಾರ್ಥ ಪ್ರಯೋಗ ನಡೆಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್ಡಿಒ) ತಿಳಿಸಿದೆ.